Categories: ಕೋಲಾರ

ಮುಳಬಾಗಿಲು ನಗರಸಭೆ ನೀರಿನ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಮುಖಂಡರಿಂದ ಡಿಸಿಗೆ ಮನವಿ

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೂ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಆದಿನಾರಾಯಣ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆದಿನಾರಾಯಣ ಮಾತನಾಡಿ, ಮುಳಬಾಗಿಲು ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4 ರ ಅಡಿಯಲ್ಲಿ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಕೂಡಲೇ ಕುಡಿಯುವ ನೀರಿನ ಕಾಮಗಾರಿಗಳಿಗೆ ಟೆಂಡರ್ ಕರೆದು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಮುಳಬಾಗಿಲು ನಗರದ ಆರ್.ಎಂ.ಸಿ. ಯಾರ್ಡ್ ಎದುರು ಇರುವ ಓವರ್‌ಹೆಡ್ ಟ್ಯಾಂಕ್, ಸಂಪು ಮತ್ತು ಪಂಪ್‌ಹೌಸ್ ದುರಸ್ಥಿ, ಮೋಟರ್ ಪಂಪ್ ಮತ್ತು ವಿದ್ಯುತೀಕರಣ ಕಾಮಗಾರಿ ಮತ್ತು ಬುಸಾಲಕುಂಟೆ ಪಂಪ್‌ ಹೌಸ್‌ಗೆ ಕಾಂಪೌಂಡ್, ಪೇವರ್‌ಬ್ಲಾಕ್ ಮತ್ತು ದುರಸ್ಥಿ ಕಾಮಗಾರಿ, ಬೊಮ್ಮನಕುಂಟೆ ಕೆರೆ ಮತ್ತು ಚೆಲುವನಾಯಕಹಳ್ಳಿ ಕೆರೆಯ ನೀರನ್ನು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ, ಕೊಳವೆಬಾವಿ ಕೊರೆಯುವುದು, ಮೋಟರ್ ಪಂಪ್, ಇತರೆ ಪೂರಕ ಸಾಮಗ್ರಿಗಳು ಹಾಗೂ ವಿದ್ಯುತೀಕರಣ ಕಾಮಗಾರಿಗಾಗಿ ನಗರೋತ್ಥಾನ ಯೋಜನೆಯಲ್ಲಿ ಹಣ ಬಿಡುಗಡೆಯಾಗಿದ್ದು ಕೂಡಲೇ ಕೆಲಸ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಮುಳಬಾಗಿಲು ನಗರಸಭೆ ವ್ಯಾಪ್ತಿಯಲ್ಲಿನ 31 ವಾರ್ಡ್ ಗಳಿಗೂ ಸರಕಾರದ14 ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್-ಮೋಟರ್ ಮತ್ತು ಇತರೆ ಪೂರಕ ಸಾಮಗ್ರಿಗಳನ್ನು ಅಳವಡಿಸುವ ಕಾಮಗಾರಿ. ವಾರ್ಡ್ ನಂ.23ರಲ್ಲಿ ನೀರು ಶುದ್ದೀಕರಣ ಘಟಕ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳ ದುರಸ್ತಿಯಿಂದ ಸ್ಥಳೀಯರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಕೊನೆಯಾಗುತ್ತದೆ ಬಹುತೇಕವಾಗಿ ಬಡವರು ಕೂಲಿಕಾರ್ಮಿಕರು ಹೆಚ್ಚಾಗಿರುವ ಇಲ್ಲಿನ ಜನ ದೂರದ ಸ್ಥಳದಿಂದ ನೀರು ತರಬೇಕಾಗಿದೆ ಕೂಡಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೂಡಲೇ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮನವಿ ನೀಡುವ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್ ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಮಾಜಿ ನಗರಸಭೆ ಅಧ್ಯಕ್ಷ ರಿಯಾಜ್ ಅಹ್ಮದ್, ಗ್ರಾಪಂ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣಪ್ಪ, ನಗರಸಭೆ ಸದಸ್ಯರಾದ ನಾಗರಾಜ್, ಶಾಹಿನ್ ಪಾಷ, ಸ್ಟಾರ್ ಇಮ್ರಾನ್, ಅಪ್ಪಿ, ಮೊಹಮ್ಮದ್ ಜಬಿ ಉಲ್ಲಾ, ಅಯೂಬ್ ಖಾನ್, ಶಂಕರಪ್ಪ, ವಿವೇಕಾನಂದ ಗೌಡ, ಶಿವಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

4 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

7 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago