Categories: ಕೋಲಾರ

ಮುಳಬಾಗಿಲು ನಗರಸಭೆ ನೀರಿನ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಮುಖಂಡರಿಂದ ಡಿಸಿಗೆ ಮನವಿ

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೂ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಆದಿನಾರಾಯಣ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆದಿನಾರಾಯಣ ಮಾತನಾಡಿ, ಮುಳಬಾಗಿಲು ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4 ರ ಅಡಿಯಲ್ಲಿ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಕೂಡಲೇ ಕುಡಿಯುವ ನೀರಿನ ಕಾಮಗಾರಿಗಳಿಗೆ ಟೆಂಡರ್ ಕರೆದು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಮುಳಬಾಗಿಲು ನಗರದ ಆರ್.ಎಂ.ಸಿ. ಯಾರ್ಡ್ ಎದುರು ಇರುವ ಓವರ್‌ಹೆಡ್ ಟ್ಯಾಂಕ್, ಸಂಪು ಮತ್ತು ಪಂಪ್‌ಹೌಸ್ ದುರಸ್ಥಿ, ಮೋಟರ್ ಪಂಪ್ ಮತ್ತು ವಿದ್ಯುತೀಕರಣ ಕಾಮಗಾರಿ ಮತ್ತು ಬುಸಾಲಕುಂಟೆ ಪಂಪ್‌ ಹೌಸ್‌ಗೆ ಕಾಂಪೌಂಡ್, ಪೇವರ್‌ಬ್ಲಾಕ್ ಮತ್ತು ದುರಸ್ಥಿ ಕಾಮಗಾರಿ, ಬೊಮ್ಮನಕುಂಟೆ ಕೆರೆ ಮತ್ತು ಚೆಲುವನಾಯಕಹಳ್ಳಿ ಕೆರೆಯ ನೀರನ್ನು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ, ಕೊಳವೆಬಾವಿ ಕೊರೆಯುವುದು, ಮೋಟರ್ ಪಂಪ್, ಇತರೆ ಪೂರಕ ಸಾಮಗ್ರಿಗಳು ಹಾಗೂ ವಿದ್ಯುತೀಕರಣ ಕಾಮಗಾರಿಗಾಗಿ ನಗರೋತ್ಥಾನ ಯೋಜನೆಯಲ್ಲಿ ಹಣ ಬಿಡುಗಡೆಯಾಗಿದ್ದು ಕೂಡಲೇ ಕೆಲಸ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಮುಳಬಾಗಿಲು ನಗರಸಭೆ ವ್ಯಾಪ್ತಿಯಲ್ಲಿನ 31 ವಾರ್ಡ್ ಗಳಿಗೂ ಸರಕಾರದ14 ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್-ಮೋಟರ್ ಮತ್ತು ಇತರೆ ಪೂರಕ ಸಾಮಗ್ರಿಗಳನ್ನು ಅಳವಡಿಸುವ ಕಾಮಗಾರಿ. ವಾರ್ಡ್ ನಂ.23ರಲ್ಲಿ ನೀರು ಶುದ್ದೀಕರಣ ಘಟಕ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳ ದುರಸ್ತಿಯಿಂದ ಸ್ಥಳೀಯರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಕೊನೆಯಾಗುತ್ತದೆ ಬಹುತೇಕವಾಗಿ ಬಡವರು ಕೂಲಿಕಾರ್ಮಿಕರು ಹೆಚ್ಚಾಗಿರುವ ಇಲ್ಲಿನ ಜನ ದೂರದ ಸ್ಥಳದಿಂದ ನೀರು ತರಬೇಕಾಗಿದೆ ಕೂಡಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೂಡಲೇ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮನವಿ ನೀಡುವ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್ ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಮಾಜಿ ನಗರಸಭೆ ಅಧ್ಯಕ್ಷ ರಿಯಾಜ್ ಅಹ್ಮದ್, ಗ್ರಾಪಂ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣಪ್ಪ, ನಗರಸಭೆ ಸದಸ್ಯರಾದ ನಾಗರಾಜ್, ಶಾಹಿನ್ ಪಾಷ, ಸ್ಟಾರ್ ಇಮ್ರಾನ್, ಅಪ್ಪಿ, ಮೊಹಮ್ಮದ್ ಜಬಿ ಉಲ್ಲಾ, ಅಯೂಬ್ ಖಾನ್, ಶಂಕರಪ್ಪ, ವಿವೇಕಾನಂದ ಗೌಡ, ಶಿವಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago