Categories: ಕೋಲಾರ

ಮುಳಬಾಗಿಲು ನಗರಸಭೆ ನೀರಿನ ಸಮಸ್ಯೆ ಪರಿಹರಿಸಲು ಕಾಂಗ್ರೆಸ್ ಮುಖಂಡರಿಂದ ಡಿಸಿಗೆ ಮನವಿ

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆ ವ್ಯಾಪ್ತಿಯ 31 ವಾರ್ಡ್ ಗಳಿಗೂ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಆದಿನಾರಾಯಣ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆದಿನಾರಾಯಣ ಮಾತನಾಡಿ, ಮುಳಬಾಗಿಲು ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ಸಮಸ್ಯೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ 4 ರ ಅಡಿಯಲ್ಲಿ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಕೂಡಲೇ ಕುಡಿಯುವ ನೀರಿನ ಕಾಮಗಾರಿಗಳಿಗೆ ಟೆಂಡರ್ ಕರೆದು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಮುಳಬಾಗಿಲು ನಗರದ ಆರ್.ಎಂ.ಸಿ. ಯಾರ್ಡ್ ಎದುರು ಇರುವ ಓವರ್‌ಹೆಡ್ ಟ್ಯಾಂಕ್, ಸಂಪು ಮತ್ತು ಪಂಪ್‌ಹೌಸ್ ದುರಸ್ಥಿ, ಮೋಟರ್ ಪಂಪ್ ಮತ್ತು ವಿದ್ಯುತೀಕರಣ ಕಾಮಗಾರಿ ಮತ್ತು ಬುಸಾಲಕುಂಟೆ ಪಂಪ್‌ ಹೌಸ್‌ಗೆ ಕಾಂಪೌಂಡ್, ಪೇವರ್‌ಬ್ಲಾಕ್ ಮತ್ತು ದುರಸ್ಥಿ ಕಾಮಗಾರಿ, ಬೊಮ್ಮನಕುಂಟೆ ಕೆರೆ ಮತ್ತು ಚೆಲುವನಾಯಕಹಳ್ಳಿ ಕೆರೆಯ ನೀರನ್ನು ಶುದ್ದೀಕರಣ ಘಟಕ ನಿರ್ಮಾಣ ಕಾಮಗಾರಿ, ಕೊಳವೆಬಾವಿ ಕೊರೆಯುವುದು, ಮೋಟರ್ ಪಂಪ್, ಇತರೆ ಪೂರಕ ಸಾಮಗ್ರಿಗಳು ಹಾಗೂ ವಿದ್ಯುತೀಕರಣ ಕಾಮಗಾರಿಗಾಗಿ ನಗರೋತ್ಥಾನ ಯೋಜನೆಯಲ್ಲಿ ಹಣ ಬಿಡುಗಡೆಯಾಗಿದ್ದು ಕೂಡಲೇ ಕೆಲಸ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

ಮುಳಬಾಗಿಲು ನಗರಸಭೆ ವ್ಯಾಪ್ತಿಯಲ್ಲಿನ 31 ವಾರ್ಡ್ ಗಳಿಗೂ ಸರಕಾರದ14 ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಪಂಪ್-ಮೋಟರ್ ಮತ್ತು ಇತರೆ ಪೂರಕ ಸಾಮಗ್ರಿಗಳನ್ನು ಅಳವಡಿಸುವ ಕಾಮಗಾರಿ. ವಾರ್ಡ್ ನಂ.23ರಲ್ಲಿ ನೀರು ಶುದ್ದೀಕರಣ ಘಟಕ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳ ದುರಸ್ತಿಯಿಂದ ಸ್ಥಳೀಯರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಕೊನೆಯಾಗುತ್ತದೆ ಬಹುತೇಕವಾಗಿ ಬಡವರು ಕೂಲಿಕಾರ್ಮಿಕರು ಹೆಚ್ಚಾಗಿರುವ ಇಲ್ಲಿನ ಜನ ದೂರದ ಸ್ಥಳದಿಂದ ನೀರು ತರಬೇಕಾಗಿದೆ ಕೂಡಲೇ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ನೀರಿನ ಸಮಸ್ಯೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೂಡಲೇ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಮನವಿ ನೀಡುವ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಆರ್.ಆರ್ ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಮಾಜಿ ನಗರಸಭೆ ಅಧ್ಯಕ್ಷ ರಿಯಾಜ್ ಅಹ್ಮದ್, ಗ್ರಾಪಂ ಉಪಾಧ್ಯಕ್ಷ ಜಮ್ಮನಹಳ್ಳಿ ಕೃಷ್ಣಪ್ಪ, ನಗರಸಭೆ ಸದಸ್ಯರಾದ ನಾಗರಾಜ್, ಶಾಹಿನ್ ಪಾಷ, ಸ್ಟಾರ್ ಇಮ್ರಾನ್, ಅಪ್ಪಿ, ಮೊಹಮ್ಮದ್ ಜಬಿ ಉಲ್ಲಾ, ಅಯೂಬ್ ಖಾನ್, ಶಂಕರಪ್ಪ, ವಿವೇಕಾನಂದ ಗೌಡ, ಶಿವಕುಮಾರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

3 hours ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

15 hours ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

19 hours ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

21 hours ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

22 hours ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

1 day ago