ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನ ತಹಶೀಲ್ದಾರ್ ಕಚೇರಿ ಮುಂದೆ ನಡೆಸುತ್ತಿದ್ದಾರೆ.
ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೆರಿಸುವಂತೆ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ಸರ್ಕಾರವನ್ನ ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ 2ನೇ ದಿನ ಮುಷ್ಕರ ನಡೆಯುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ನಾರಾಯಣಗೌಡ ಬಣ ಪರವಾಗಿ ನಿಲ್ಲುತ್ತದೆ. ಸದಾ ಕನ್ನಡ ನಾಡು ನುಡಿ ಬಗ್ಗೆ ಹೋರಾಟ ಮಾಡುತ್ತಿರುವ ಸಂಘಟನೆ ಸರ್ಕಾರಿ ನೌಕರರ ನ್ಯಾಯುಯುತ ಹೋರಾಟಕ್ಕೂ ಬೆಂಬಲವಾಗಿ ನಿಲ್ಲಲಾಗುವುದು ಎಂದು ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.
ಆಡಳಿತ ಯಂತ್ರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ, ಅವರೀವತ್ತು ತಮ್ಮ ಬೇಡಿಕೆಗಳ ಈಡೆರಿಕೆಗಾಗಿ ಮುಷ್ಕರಕ್ಕೆ ಕುಳಿತ್ತಿರುವುದು ಬಹಳ ನೋವಿನ ವಿಚಾರವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ, 7ನೇ ವೇತನ ನೀಡುವುದು, ವಿಮಾ ಸೌಲಭ್ಯ , ಸುಸಜ್ಜಿತವಾದ ಕಟ್ಟಡ, ಇವು ಮೂಲಭೂತ ಸೌಲಭ್ಯಗಳಾಗಿದ್ದು ಇವುಗಳನ್ನು ಸರ್ಕಾರ ನೀಡುಬೇಕು ಎಂದರು.