ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವಂತೆ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಒತ್ತಾಯ

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನ ತಹಶೀಲ್ದಾರ್ ಕಚೇರಿ ಮುಂದೆ ನಡೆಸುತ್ತಿದ್ದಾರೆ.

ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೆರಿಸುವಂತೆ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ಸರ್ಕಾರವನ್ನ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ 2ನೇ ದಿನ ಮುಷ್ಕರ ನಡೆಯುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ನಾರಾಯಣಗೌಡ ಬಣ ಪರವಾಗಿ ನಿಲ್ಲುತ್ತದೆ. ಸದಾ ಕನ್ನಡ ನಾಡು ನುಡಿ ಬಗ್ಗೆ ಹೋರಾಟ ಮಾಡುತ್ತಿರುವ ಸಂಘಟನೆ ಸರ್ಕಾರಿ ನೌಕರರ ನ್ಯಾಯುಯುತ ಹೋರಾಟಕ್ಕೂ ಬೆಂಬಲವಾಗಿ ನಿಲ್ಲಲಾಗುವುದು ಎಂದು ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.
ಆಡಳಿತ ಯಂತ್ರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ, ಅವರೀವತ್ತು ತಮ್ಮ ಬೇಡಿಕೆಗಳ ಈಡೆರಿಕೆಗಾಗಿ ಮುಷ್ಕರಕ್ಕೆ ಕುಳಿತ್ತಿರುವುದು ಬಹಳ ನೋವಿನ ವಿಚಾರವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ, 7ನೇ ವೇತನ ನೀಡುವುದು, ವಿಮಾ ಸೌಲಭ್ಯ , ಸುಸಜ್ಜಿತವಾದ ಕಟ್ಟಡ, ಇವು ಮೂಲಭೂತ ಸೌಲಭ್ಯಗಳಾಗಿದ್ದು ಇವುಗಳನ್ನು ಸರ್ಕಾರ ನೀಡುಬೇಕು‌ ಎಂದರು.
Ramesh Babu

Journalist

Recent Posts

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

5 minutes ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

2 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

3 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

12 hours ago