ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸುವಂತೆ ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಒತ್ತಾಯ

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರವನ್ನ ತಹಶೀಲ್ದಾರ್ ಕಚೇರಿ ಮುಂದೆ ನಡೆಸುತ್ತಿದ್ದಾರೆ.

ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಆದಷ್ಟು ಬೇಗ ಈಡೆರಿಸುವಂತೆ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ಸರ್ಕಾರವನ್ನ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ 2ನೇ ದಿನ ಮುಷ್ಕರ ನಡೆಯುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ನಾರಾಯಣಗೌಡ ಬಣ ಪರವಾಗಿ ನಿಲ್ಲುತ್ತದೆ. ಸದಾ ಕನ್ನಡ ನಾಡು ನುಡಿ ಬಗ್ಗೆ ಹೋರಾಟ ಮಾಡುತ್ತಿರುವ ಸಂಘಟನೆ ಸರ್ಕಾರಿ ನೌಕರರ ನ್ಯಾಯುಯುತ ಹೋರಾಟಕ್ಕೂ ಬೆಂಬಲವಾಗಿ ನಿಲ್ಲಲಾಗುವುದು ಎಂದು ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿದ್ದಾರೆ.
ಆಡಳಿತ ಯಂತ್ರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ, ಅವರೀವತ್ತು ತಮ್ಮ ಬೇಡಿಕೆಗಳ ಈಡೆರಿಕೆಗಾಗಿ ಮುಷ್ಕರಕ್ಕೆ ಕುಳಿತ್ತಿರುವುದು ಬಹಳ ನೋವಿನ ವಿಚಾರವಾಗಿದೆ. ಅವರ ಬೇಡಿಕೆಗಳು ನ್ಯಾಯಯುತವಾಗಿದೆ, 7ನೇ ವೇತನ ನೀಡುವುದು, ವಿಮಾ ಸೌಲಭ್ಯ , ಸುಸಜ್ಜಿತವಾದ ಕಟ್ಟಡ, ಇವು ಮೂಲಭೂತ ಸೌಲಭ್ಯಗಳಾಗಿದ್ದು ಇವುಗಳನ್ನು ಸರ್ಕಾರ ನೀಡುಬೇಕು‌ ಎಂದರು.
Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

9 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago