ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು.
ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಡಿ.31ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹ
ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ ಎಂದು ಹೇಳಿದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…