ಮುಸಲ್ಮಾನರಿಗೆ 4% ಮೀಸಲಾತಿಯನ್ನು ನೀಡುವುದು ಸಂವಿಧಾನ ಪ್ರಜಾಪ್ರಭುತ್ವದ ವಿರೋಧವಾಗಿದೆ-ಬಜರಂಗದಳ

ದೊಡ್ಡಬಳ್ಳಾಪುರ: ಕರ್ನಾಟಕ ಸರ್ಕಾರದ ಕಟ್ಟಡ ಕಾಮಗಾರಿ ಮತ್ತು ಸರಕು ಸಾಗಣಿಕೆ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿಯನ್ನು ನೀಡುವುದು

ಸಂವಿಧಾನ ಪ್ರಜಾಪ್ರಭುತ್ವದ ವಿರೋಧವಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಹೇಳಿದರು.

ನಗರದ ತಾಲೂಕು ಕಚೇರಿಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ಸಂವಿಧಾನದ ಆರ್ಟಿಕಲ್ 15 ನಿರ್ದಿಷ್ಟವಾಗಿ ರಾಜ್ಯವು ಧರ್ಮ ಮತ್ತು ಜಾತಿ ಆಧಾರದ ಮೇಲೆ ನಾಗರಿಕರ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ ಎಂದರು.

ಜಬರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಧರ್ಮಧಾರಿತ ಮೀಸಲಾತಿಯನ್ನು ನೀಡುವಂತಿಲ್ಲ ಎಂದು ಕಾಲಕಾಲಕ್ಕೂ ಸುಪ್ರೀಂ ಕೋರ್ಟ್ ಆದೇಶ ನೀಡಿದರು ಕೂಡ, ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರದ ವೋಟ್ ಬ್ಯಾಂಕ್ ಆಗಿರುವ ಸಮುದಾಯವನ್ನು ಸಮಾಧಾನಪಡಿಸಲು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ಒದಗಿಸುವ ಕಾರ್ಯವು ರಾಷ್ಟ್ರೀಯ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತೆಗೆ ಅಪಾಯವನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಮಸೂದೆಯನ್ನು ಅನುಮೋದಿಸದೇ ತಡೆ ಹಿಡಿಯಬೇಕೆಂದು ಒತ್ತಾಯಿಸಿದರು.

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ರವಿ, ಸಹಕಾರ್ಯದರ್ಶಿ ಭಗತ್ ಭಾಸ್ಕರ್, ತಾಲೂಕು ಅಧ್ಯಕ್ಷ ಮಧುಸೂದನ್, ತಾಲೂಕು ಬಜರಂಗದಳ ಸಂಯೋಜಕ್ ವಿರಾಜ್, ಮುಖಂಡರಾದ ಮಹಾಂತೇಶ್, ಮನು, ಸೋಮು ಇದ್ದರು.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

4 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

15 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

16 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

16 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

16 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

20 hours ago