ದೊಡ್ಡಬಳ್ಳಾಪುರ: ಕರ್ನಾಟಕ ಸರ್ಕಾರದ ಕಟ್ಟಡ ಕಾಮಗಾರಿ ಮತ್ತು ಸರಕು ಸಾಗಣಿಕೆ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿಯನ್ನು ನೀಡುವುದು
ಸಂವಿಧಾನ ಪ್ರಜಾಪ್ರಭುತ್ವದ ವಿರೋಧವಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಹೇಳಿದರು.
ನಗರದ ತಾಲೂಕು ಕಚೇರಿಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಮಾತನಾಡಿದರು.
ಕರ್ನಾಟಕ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.
ಸಂವಿಧಾನದ ಆರ್ಟಿಕಲ್ 15 ನಿರ್ದಿಷ್ಟವಾಗಿ ರಾಜ್ಯವು ಧರ್ಮ ಮತ್ತು ಜಾತಿ ಆಧಾರದ ಮೇಲೆ ನಾಗರಿಕರ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ ಎಂದರು.
ಜಬರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಧರ್ಮಧಾರಿತ ಮೀಸಲಾತಿಯನ್ನು ನೀಡುವಂತಿಲ್ಲ ಎಂದು ಕಾಲಕಾಲಕ್ಕೂ ಸುಪ್ರೀಂ ಕೋರ್ಟ್ ಆದೇಶ ನೀಡಿದರು ಕೂಡ, ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರದ ವೋಟ್ ಬ್ಯಾಂಕ್ ಆಗಿರುವ ಸಮುದಾಯವನ್ನು ಸಮಾಧಾನಪಡಿಸಲು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ಒದಗಿಸುವ ಕಾರ್ಯವು ರಾಷ್ಟ್ರೀಯ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತೆಗೆ ಅಪಾಯವನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಮಸೂದೆಯನ್ನು ಅನುಮೋದಿಸದೇ ತಡೆ ಹಿಡಿಯಬೇಕೆಂದು ಒತ್ತಾಯಿಸಿದರು.
ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ರವಿ, ಸಹಕಾರ್ಯದರ್ಶಿ ಭಗತ್ ಭಾಸ್ಕರ್, ತಾಲೂಕು ಅಧ್ಯಕ್ಷ ಮಧುಸೂದನ್, ತಾಲೂಕು ಬಜರಂಗದಳ ಸಂಯೋಜಕ್ ವಿರಾಜ್, ಮುಖಂಡರಾದ ಮಹಾಂತೇಶ್, ಮನು, ಸೋಮು ಇದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…