ಮುಸಲ್ಮಾನರಿಗೆ 4% ಮೀಸಲಾತಿಯನ್ನು ನೀಡುವುದು ಸಂವಿಧಾನ ಪ್ರಜಾಪ್ರಭುತ್ವದ ವಿರೋಧವಾಗಿದೆ-ಬಜರಂಗದಳ

ದೊಡ್ಡಬಳ್ಳಾಪುರ: ಕರ್ನಾಟಕ ಸರ್ಕಾರದ ಕಟ್ಟಡ ಕಾಮಗಾರಿ ಮತ್ತು ಸರಕು ಸಾಗಣಿಕೆ ಗುತ್ತಿಗೆಯಲ್ಲಿ ಮುಸಲ್ಮಾನರಿಗೆ 4% ಮೀಸಲಾತಿಯನ್ನು ನೀಡುವುದು

ಸಂವಿಧಾನ ಪ್ರಜಾಪ್ರಭುತ್ವದ ವಿರೋಧವಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗದ ಸಂಯೋಜಕ ನರೇಶ್ ರೆಡ್ಡಿ ಹೇಳಿದರು.

ನಗರದ ತಾಲೂಕು ಕಚೇರಿಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಮಾತನಾಡಿದರು.

ಕರ್ನಾಟಕ ರಾಜ್ಯ ಸರ್ಕಾರವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ಪರಿಚಯಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.

ಸಂವಿಧಾನದ ಆರ್ಟಿಕಲ್ 15 ನಿರ್ದಿಷ್ಟವಾಗಿ ರಾಜ್ಯವು ಧರ್ಮ ಮತ್ತು ಜಾತಿ ಆಧಾರದ ಮೇಲೆ ನಾಗರಿಕರ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ ಎಂದರು.

ಜಬರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಧರ್ಮಧಾರಿತ ಮೀಸಲಾತಿಯನ್ನು ನೀಡುವಂತಿಲ್ಲ ಎಂದು ಕಾಲಕಾಲಕ್ಕೂ ಸುಪ್ರೀಂ ಕೋರ್ಟ್ ಆದೇಶ ನೀಡಿದರು ಕೂಡ, ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರದ ವೋಟ್ ಬ್ಯಾಂಕ್ ಆಗಿರುವ ಸಮುದಾಯವನ್ನು ಸಮಾಧಾನಪಡಿಸಲು, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ಒದಗಿಸುವ ಕಾರ್ಯವು ರಾಷ್ಟ್ರೀಯ ಸಮಗ್ರತೆ, ಏಕತೆ ಮತ್ತು ಸಾರ್ವಭೌಮತೆಗೆ ಅಪಾಯವನ್ನುಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ರಾಜ್ಯಪಾಲರು ಮಸೂದೆಯನ್ನು ಅನುಮೋದಿಸದೇ ತಡೆ ಹಿಡಿಯಬೇಕೆಂದು ಒತ್ತಾಯಿಸಿದರು.

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ರವಿ, ಸಹಕಾರ್ಯದರ್ಶಿ ಭಗತ್ ಭಾಸ್ಕರ್, ತಾಲೂಕು ಅಧ್ಯಕ್ಷ ಮಧುಸೂದನ್, ತಾಲೂಕು ಬಜರಂಗದಳ ಸಂಯೋಜಕ್ ವಿರಾಜ್, ಮುಖಂಡರಾದ ಮಹಾಂತೇಶ್, ಮನು, ಸೋಮು ಇದ್ದರು.

Ramesh Babu

Journalist

Recent Posts

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

27 minutes ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

7 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

20 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

22 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago