ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಮಾಡಿ ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಅಡಾಕ್ ಕಮಿಟಿ ಮಾಡುವ ಪ್ರಯತ್ನವನ್ನು ವಿರೋಧಿಸಿ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ತಾಲ್ಲೂಕಿನಲ್ಲಿ ಮುಸ್ಲಿಂ ಸಮುದಾಯ 25 ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿದೆ. 37 ಮಸೀದಿಗಳಿವೆ, ಎಲ್ಲಾ ಮಸೀದಿ ಮುಖಂಡರು ಸೇರಿ ಒಟ್ಟಾರೆ ಮುಸ್ಲಿಂ ಸಮುದಾಯವನ್ನು ಸೇರಿಸಿ ಮತದಾರರ ಪಟ್ಟಿ ತಯಾರಿಸಿ ಚುನಾವಣೆ ನಡೆಸಬೇಕು ಎಂದು ಮನವಿ ಕೊಟ್ಟಿದ್ದೇವೆ, ಆದರೆ ನಗರದ ಎರಡು ವಾರ್ಡ್ಗಳಿಗಷ್ಟೇ ಚುನಾವಣೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಅಸೋಸಿಯೇಷನ್ ಗೆ ಕಳೆದ ಹದಿಮೂರು ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು, ದೇಶದ ಸಂವಿಧಾನವನ್ನೇ ಕಾಲ ಕಾಲಕ್ಕೆ ಜನರ ಅನುಕೂಲಕ್ಕಾಗಿ ತಿದ್ದುಪಡಿ ಮಾಲಾಗುತ್ತಿದೆ. ಆದರೆ ಬೈಲಾ ದಲ್ಲಿರುವ ಸಣ್ಣ ಲೋಪವನ್ನು ತೋರಿಸಿ ಅಡಾಕ್ ಕಮಿಟಿಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ತಾಲ್ಲೂಕಿನ ಸಮಗ್ರ ಮುಸ್ಲಿಮರನ್ನು ಪ್ರತಿನಿಧಿಸಬೇಕಾದ ವಕ್ಫ್ಬೋರ್ಡ್ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣೆ ಹಾಕುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಕಾಲ ಕಾಲಕ್ಕೆ ಚುನಾವಣೆಗಳು ನಡೆದು ಆಡಳಿತ ಮಂಡಳಿ ರಚನೆಯಾದರೆ ವರ್ಷಕೊಮ್ಮೆ ಸಾಮೂಹಿಕ ವಿವಾಹ, ಅಶಕ್ತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ವಯೋವೃದ್ದರಿಗೆ ಪೆನ್ಶನ್ ಕೊಡಬಹುದು. ಕಳೆದ ಹನ್ನೆರಡು ವರ್ಷಗಳಿಂದ ಇಂಹ ಯಾವುದೇ ಸಮಾಜಮುಖಿ ಕಾರ್ಯಗಳು ನಡೆದಿಲ್ಲ. ಬೆರಳೆಣಿಕೆಯಷ್ಟು ಮಂದಿ ಸೇರಿ ಸಭೆ ನಡೆಸಿ ಟೀ ಕುಡಿಯಲು ₹35000 ವೆಚ್ಚ ತೋರಿಸಿತ್ತಿದ್ದಾರೆ ಎಂದು ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀನಗರ ಬಶೀರ್ ಮಾಜಿ ಸದಸ್ಯರು ಮುಸ್ಲಿಂ ಯೂಥ್ ಅಸೋಸಿಯೇಷನ್. ರಫೀಕ್ ಪಾಷಾ ಮಾಜಿ ಸದಸ್ಯರು ಇಬ್ರಾಹಿಂ( ಬಾಪ್ ). ಇಫ್ತೆ ಕಾರ್ ಅಹಮದ್. ನಯಾಜ್ ಖಾನ್. ಮೊಹಮ್ಮದ್ ರಜಾ. ಮೊಹಮ್ಮದ್ ಏನಾಯತ್. ಫಯಾಜ್. ಆದಿಲ್. ಶಬ್ಬೀರ್. ಇಮ್ರಾನ್. ರಫೀಕ್.. ಫಯಾಜ್. ನೂರ್ ಭಾಯ್. ಇಲಿಯಾಸ್ ಅಹಮದ್, ನವೀದ್, ಸೇರಿದಂತೆ ಹತ್ತಾರು ಮುಸ್ಲಿಂ ಮುಖಂಡರುಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…