ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಬೇಕು- ಮುಸ್ಲಿಂ ಮುಖಂಡರ ಆಗ್ರಹ

ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಮಾಡಿ ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

 ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಅಡಾಕ್ ಕಮಿಟಿ ಮಾಡುವ ಪ್ರಯತ್ನವನ್ನು ವಿರೋಧಿಸಿ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಮುಸ್ಲಿಂ ಸಮುದಾಯ 25 ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿದೆ. 37 ಮಸೀದಿಗಳಿವೆ, ಎಲ್ಲಾ ಮಸೀದಿ ಮುಖಂಡರು ಸೇರಿ ಒಟ್ಟಾರೆ ಮುಸ್ಲಿಂ ಸಮುದಾಯವನ್ನು ಸೇರಿಸಿ ಮತದಾರರ ಪಟ್ಟಿ ತಯಾರಿಸಿ ಚುನಾವಣೆ ನಡೆಸಬೇಕು ಎಂದು ಮನವಿ ಕೊಟ್ಟಿದ್ದೇವೆ, ಆದರೆ ನಗರದ ಎರಡು ವಾರ್ಡ್‌ಗಳಿಗಷ್ಟೇ ಚುನಾವಣೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಅಸೋಸಿಯೇಷನ್ ಗೆ ಕಳೆದ ಹದಿಮೂರು ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು, ದೇಶದ ಸಂವಿಧಾನವನ್ನೇ ಕಾಲ ಕಾಲಕ್ಕೆ ಜನರ ಅನುಕೂಲಕ್ಕಾಗಿ ತಿದ್ದುಪಡಿ ಮಾಲಾಗುತ್ತಿದೆ. ಆದರೆ ಬೈಲಾ ದಲ್ಲಿರುವ ಸಣ್ಣ ಲೋಪವನ್ನು ತೋರಿಸಿ ಅಡಾಕ್ ಕಮಿಟಿಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ತಾಲ್ಲೂಕಿನ ಸಮಗ್ರ ಮುಸ್ಲಿಮರನ್ನು ಪ್ರತಿನಿಧಿಸಬೇಕಾದ ವಕ್ಫ್‌ಬೋರ್ಡ್ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣೆ ಹಾಕುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಕಾಲ ಕಾಲಕ್ಕೆ ಚುನಾವಣೆಗಳು ನಡೆದು ಆಡಳಿತ ಮಂಡಳಿ ರಚನೆಯಾದರೆ ವರ್ಷಕೊಮ್ಮೆ ಸಾಮೂಹಿಕ ವಿವಾಹ, ಅಶಕ್ತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ವಯೋವೃದ್ದರಿಗೆ ಪೆನ್ಶನ್ ಕೊಡಬಹುದು. ಕಳೆದ ಹನ್ನೆರಡು ವರ್ಷಗಳಿಂದ ಇಂಹ ಯಾವುದೇ ಸಮಾಜಮುಖಿ ಕಾರ್ಯಗಳು ನಡೆದಿಲ್ಲ. ಬೆರಳೆಣಿಕೆಯಷ್ಟು ಮಂದಿ ಸೇರಿ ಸಭೆ ನಡೆಸಿ ಟೀ ಕುಡಿಯಲು ₹35000 ವೆಚ್ಚ ತೋರಿಸಿತ್ತಿದ್ದಾರೆ ಎಂದು ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀನಗರ ಬಶೀರ್ ಮಾಜಿ ಸದಸ್ಯರು ಮುಸ್ಲಿಂ ಯೂಥ್ ಅಸೋಸಿಯೇಷನ್. ರಫೀಕ್ ಪಾಷಾ ಮಾಜಿ ಸದಸ್ಯರು ಇಬ್ರಾಹಿಂ( ಬಾಪ್ ). ಇಫ್ತೆ ಕಾರ್ ಅಹಮದ್. ನಯಾಜ್ ಖಾನ್. ಮೊಹಮ್ಮದ್ ರಜಾ. ಮೊಹಮ್ಮದ್ ಏನಾಯತ್. ಫಯಾಜ್. ಆದಿಲ್. ಶಬ್ಬೀರ್. ಇಮ್ರಾನ್. ರಫೀಕ್.. ಫಯಾಜ್. ನೂರ್ ಭಾಯ್. ಇಲಿಯಾಸ್ ಅಹಮದ್, ನವೀದ್,  ಸೇರಿದಂತೆ ಹತ್ತಾರು ಮುಸ್ಲಿಂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

4 hours ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

5 hours ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

5 hours ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

11 hours ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

15 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

17 hours ago