ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಬೇಕು- ಮುಸ್ಲಿಂ ಮುಖಂಡರ ಆಗ್ರಹ

ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಮಾಡಿ ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

 ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಅಡಾಕ್ ಕಮಿಟಿ ಮಾಡುವ ಪ್ರಯತ್ನವನ್ನು ವಿರೋಧಿಸಿ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಮುಸ್ಲಿಂ ಸಮುದಾಯ 25 ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿದೆ. 37 ಮಸೀದಿಗಳಿವೆ, ಎಲ್ಲಾ ಮಸೀದಿ ಮುಖಂಡರು ಸೇರಿ ಒಟ್ಟಾರೆ ಮುಸ್ಲಿಂ ಸಮುದಾಯವನ್ನು ಸೇರಿಸಿ ಮತದಾರರ ಪಟ್ಟಿ ತಯಾರಿಸಿ ಚುನಾವಣೆ ನಡೆಸಬೇಕು ಎಂದು ಮನವಿ ಕೊಟ್ಟಿದ್ದೇವೆ, ಆದರೆ ನಗರದ ಎರಡು ವಾರ್ಡ್‌ಗಳಿಗಷ್ಟೇ ಚುನಾವಣೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಅಸೋಸಿಯೇಷನ್ ಗೆ ಕಳೆದ ಹದಿಮೂರು ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು, ದೇಶದ ಸಂವಿಧಾನವನ್ನೇ ಕಾಲ ಕಾಲಕ್ಕೆ ಜನರ ಅನುಕೂಲಕ್ಕಾಗಿ ತಿದ್ದುಪಡಿ ಮಾಲಾಗುತ್ತಿದೆ. ಆದರೆ ಬೈಲಾ ದಲ್ಲಿರುವ ಸಣ್ಣ ಲೋಪವನ್ನು ತೋರಿಸಿ ಅಡಾಕ್ ಕಮಿಟಿಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ತಾಲ್ಲೂಕಿನ ಸಮಗ್ರ ಮುಸ್ಲಿಮರನ್ನು ಪ್ರತಿನಿಧಿಸಬೇಕಾದ ವಕ್ಫ್‌ಬೋರ್ಡ್ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣೆ ಹಾಕುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಕಾಲ ಕಾಲಕ್ಕೆ ಚುನಾವಣೆಗಳು ನಡೆದು ಆಡಳಿತ ಮಂಡಳಿ ರಚನೆಯಾದರೆ ವರ್ಷಕೊಮ್ಮೆ ಸಾಮೂಹಿಕ ವಿವಾಹ, ಅಶಕ್ತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ವಯೋವೃದ್ದರಿಗೆ ಪೆನ್ಶನ್ ಕೊಡಬಹುದು. ಕಳೆದ ಹನ್ನೆರಡು ವರ್ಷಗಳಿಂದ ಇಂಹ ಯಾವುದೇ ಸಮಾಜಮುಖಿ ಕಾರ್ಯಗಳು ನಡೆದಿಲ್ಲ. ಬೆರಳೆಣಿಕೆಯಷ್ಟು ಮಂದಿ ಸೇರಿ ಸಭೆ ನಡೆಸಿ ಟೀ ಕುಡಿಯಲು ₹35000 ವೆಚ್ಚ ತೋರಿಸಿತ್ತಿದ್ದಾರೆ ಎಂದು ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀನಗರ ಬಶೀರ್ ಮಾಜಿ ಸದಸ್ಯರು ಮುಸ್ಲಿಂ ಯೂಥ್ ಅಸೋಸಿಯೇಷನ್. ರಫೀಕ್ ಪಾಷಾ ಮಾಜಿ ಸದಸ್ಯರು ಇಬ್ರಾಹಿಂ( ಬಾಪ್ ). ಇಫ್ತೆ ಕಾರ್ ಅಹಮದ್. ನಯಾಜ್ ಖಾನ್. ಮೊಹಮ್ಮದ್ ರಜಾ. ಮೊಹಮ್ಮದ್ ಏನಾಯತ್. ಫಯಾಜ್. ಆದಿಲ್. ಶಬ್ಬೀರ್. ಇಮ್ರಾನ್. ರಫೀಕ್.. ಫಯಾಜ್. ನೂರ್ ಭಾಯ್. ಇಲಿಯಾಸ್ ಅಹಮದ್, ನವೀದ್,  ಸೇರಿದಂತೆ ಹತ್ತಾರು ಮುಸ್ಲಿಂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

4 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago