ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಬೇಕು- ಮುಸ್ಲಿಂ ಮುಖಂಡರ ಆಗ್ರಹ

ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಸೆಲೆಕ್ಷನ್ ಬೇಡ, ಎಲೆಕ್ಷನ್ ಮಾಡಿ ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.

 ಮುಸ್ಲಿಂ ಯೂತ್ ಅಸೋಸಿಯೇಷನ್ ಗೆ ಅಡಾಕ್ ಕಮಿಟಿ ಮಾಡುವ ಪ್ರಯತ್ನವನ್ನು ವಿರೋಧಿಸಿ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಮುಸ್ಲಿಂ ಸಮುದಾಯ 25 ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿದೆ. 37 ಮಸೀದಿಗಳಿವೆ, ಎಲ್ಲಾ ಮಸೀದಿ ಮುಖಂಡರು ಸೇರಿ ಒಟ್ಟಾರೆ ಮುಸ್ಲಿಂ ಸಮುದಾಯವನ್ನು ಸೇರಿಸಿ ಮತದಾರರ ಪಟ್ಟಿ ತಯಾರಿಸಿ ಚುನಾವಣೆ ನಡೆಸಬೇಕು ಎಂದು ಮನವಿ ಕೊಟ್ಟಿದ್ದೇವೆ, ಆದರೆ ನಗರದ ಎರಡು ವಾರ್ಡ್‌ಗಳಿಗಷ್ಟೇ ಚುನಾವಣೆ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಅಸೋಸಿಯೇಷನ್ ಗೆ ಕಳೆದ ಹದಿಮೂರು ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು, ದೇಶದ ಸಂವಿಧಾನವನ್ನೇ ಕಾಲ ಕಾಲಕ್ಕೆ ಜನರ ಅನುಕೂಲಕ್ಕಾಗಿ ತಿದ್ದುಪಡಿ ಮಾಲಾಗುತ್ತಿದೆ. ಆದರೆ ಬೈಲಾ ದಲ್ಲಿರುವ ಸಣ್ಣ ಲೋಪವನ್ನು ತೋರಿಸಿ ಅಡಾಕ್ ಕಮಿಟಿಗಳನ್ನೇ ಮಾಡುತ್ತಾ ಬರುತ್ತಿದ್ದಾರೆ. ತಾಲ್ಲೂಕಿನ ಸಮಗ್ರ ಮುಸ್ಲಿಮರನ್ನು ಪ್ರತಿನಿಧಿಸಬೇಕಾದ ವಕ್ಫ್‌ಬೋರ್ಡ್ ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಮಣೆ ಹಾಕುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಕಾಲ ಕಾಲಕ್ಕೆ ಚುನಾವಣೆಗಳು ನಡೆದು ಆಡಳಿತ ಮಂಡಳಿ ರಚನೆಯಾದರೆ ವರ್ಷಕೊಮ್ಮೆ ಸಾಮೂಹಿಕ ವಿವಾಹ, ಅಶಕ್ತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ವಯೋವೃದ್ದರಿಗೆ ಪೆನ್ಶನ್ ಕೊಡಬಹುದು. ಕಳೆದ ಹನ್ನೆರಡು ವರ್ಷಗಳಿಂದ ಇಂಹ ಯಾವುದೇ ಸಮಾಜಮುಖಿ ಕಾರ್ಯಗಳು ನಡೆದಿಲ್ಲ. ಬೆರಳೆಣಿಕೆಯಷ್ಟು ಮಂದಿ ಸೇರಿ ಸಭೆ ನಡೆಸಿ ಟೀ ಕುಡಿಯಲು ₹35000 ವೆಚ್ಚ ತೋರಿಸಿತ್ತಿದ್ದಾರೆ ಎಂದು ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀನಗರ ಬಶೀರ್ ಮಾಜಿ ಸದಸ್ಯರು ಮುಸ್ಲಿಂ ಯೂಥ್ ಅಸೋಸಿಯೇಷನ್. ರಫೀಕ್ ಪಾಷಾ ಮಾಜಿ ಸದಸ್ಯರು ಇಬ್ರಾಹಿಂ( ಬಾಪ್ ). ಇಫ್ತೆ ಕಾರ್ ಅಹಮದ್. ನಯಾಜ್ ಖಾನ್. ಮೊಹಮ್ಮದ್ ರಜಾ. ಮೊಹಮ್ಮದ್ ಏನಾಯತ್. ಫಯಾಜ್. ಆದಿಲ್. ಶಬ್ಬೀರ್. ಇಮ್ರಾನ್. ರಫೀಕ್.. ಫಯಾಜ್. ನೂರ್ ಭಾಯ್. ಇಲಿಯಾಸ್ ಅಹಮದ್, ನವೀದ್,  ಸೇರಿದಂತೆ ಹತ್ತಾರು ಮುಸ್ಲಿಂ ಮುಖಂಡರುಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

57 minutes ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago