Categories: Crime

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸ್ ತಂಡದಿಂದ ಕುಖ್ಯಾತ ಚೋರರ ಬಂಧನ

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿಯ ನಿರ್ಮಲಾ ಪಂಡಿತ್ ಅವರ ಕುತ್ತಿಗೆಯಿಂದ 24 ಗ್ರಾಂ ಮೌಲ್ಯದ ಚಿನ್ನದ ಸರ ಹಾಗೂ ಮೂಡುಮಾರ್ನಾಡು ಗ್ರಾಮದ ಬಸದಿ ಬಳಿಯ ಪ್ರೇಮಾ ಅವರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರಿಬ್ಬರನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಂಗಳೂರು ಚೆಂಬುಗುಡ್ಡೆಯ ಹಬೀಬ್ ಹಸನ್ ಯಾನೆ ಹಬ್ಬಿ ಹಾಗೂ ಬಂಟ್ವಾಳ ತಾಲೂಕು ಪರ್ಲಿಯಾ ಕ್ರಾಸ್ ರೋಡ್ ನ ಉಮ್ಮರ್ ಸಿಯಾಫ್ ಯಾನೆ ಚಿಯಾ ಬಂಧನಕ್ಕೊಳಗಾಗಿರುವ ಕಳ್ಳರು.

ಹಬ್ಬಿ ವಿರುದ್ಧ ಉಭಯ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಸುಮಾರು 44 ಪ್ರಕರಣಗಳಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಹಲವು ವಾರಂಟ್ ಗಳಿತ್ತು. ಚಿಯಾ ನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಮಹಿಳೆಯರ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾಗಿದ್ದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಜಾಡು ಹಿಡಿದು ಕಳೆದ ಕೆಲ ದಿನಗಳಿಂದ ವಿವಿಧ ರೀತಿಗಳಲ್ಲಿ ಶೋಧ ನಡೆಸಿದ್ದ ಪೊಲೀಸರ ಬಲೆಗೆ ಕೊನೆಗೂ ಕಳ್ಳರು ಸಿಕ್ಕಿಬಿದ್ದಿದ್ದಾರೆ.

‌‌ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 2,50,000 ಆಗಿದೆ.

ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿ.ಸಿ.ಪಿ. ಯವರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ಹಾಗೂ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ. ಗಳಾದ ಪ್ರಶಾಂತ್, ಮೋಹನ್ ದಾಸ್ ಕೋಟ್ಯಾನ್, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಖಿಲ್ ಅಹ್ಮದ್, ನಾಗರಾಜ್ ಹಾಗೂ ವೆಂಕಟೇಶ್ ಅವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago