Categories: Crime

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸ್ ತಂಡದಿಂದ ಕುಖ್ಯಾತ ಚೋರರ ಬಂಧನ

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿಯ ನಿರ್ಮಲಾ ಪಂಡಿತ್ ಅವರ ಕುತ್ತಿಗೆಯಿಂದ 24 ಗ್ರಾಂ ಮೌಲ್ಯದ ಚಿನ್ನದ ಸರ ಹಾಗೂ ಮೂಡುಮಾರ್ನಾಡು ಗ್ರಾಮದ ಬಸದಿ ಬಳಿಯ ಪ್ರೇಮಾ ಅವರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರಿಬ್ಬರನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಂಗಳೂರು ಚೆಂಬುಗುಡ್ಡೆಯ ಹಬೀಬ್ ಹಸನ್ ಯಾನೆ ಹಬ್ಬಿ ಹಾಗೂ ಬಂಟ್ವಾಳ ತಾಲೂಕು ಪರ್ಲಿಯಾ ಕ್ರಾಸ್ ರೋಡ್ ನ ಉಮ್ಮರ್ ಸಿಯಾಫ್ ಯಾನೆ ಚಿಯಾ ಬಂಧನಕ್ಕೊಳಗಾಗಿರುವ ಕಳ್ಳರು.

ಹಬ್ಬಿ ವಿರುದ್ಧ ಉಭಯ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಸುಮಾರು 44 ಪ್ರಕರಣಗಳಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಹಲವು ವಾರಂಟ್ ಗಳಿತ್ತು. ಚಿಯಾ ನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಮಹಿಳೆಯರ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾಗಿದ್ದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಜಾಡು ಹಿಡಿದು ಕಳೆದ ಕೆಲ ದಿನಗಳಿಂದ ವಿವಿಧ ರೀತಿಗಳಲ್ಲಿ ಶೋಧ ನಡೆಸಿದ್ದ ಪೊಲೀಸರ ಬಲೆಗೆ ಕೊನೆಗೂ ಕಳ್ಳರು ಸಿಕ್ಕಿಬಿದ್ದಿದ್ದಾರೆ.

‌‌ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 2,50,000 ಆಗಿದೆ.

ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿ.ಸಿ.ಪಿ. ಯವರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ಹಾಗೂ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ. ಗಳಾದ ಪ್ರಶಾಂತ್, ಮೋಹನ್ ದಾಸ್ ಕೋಟ್ಯಾನ್, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಖಿಲ್ ಅಹ್ಮದ್, ನಾಗರಾಜ್ ಹಾಗೂ ವೆಂಕಟೇಶ್ ಅವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

3 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

4 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

7 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

14 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago