Categories: Crime

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸ್ ತಂಡದಿಂದ ಕುಖ್ಯಾತ ಚೋರರ ಬಂಧನ

ಮೂಡುಬಿದಿರೆ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿಯ ನಿರ್ಮಲಾ ಪಂಡಿತ್ ಅವರ ಕುತ್ತಿಗೆಯಿಂದ 24 ಗ್ರಾಂ ಮೌಲ್ಯದ ಚಿನ್ನದ ಸರ ಹಾಗೂ ಮೂಡುಮಾರ್ನಾಡು ಗ್ರಾಮದ ಬಸದಿ ಬಳಿಯ ಪ್ರೇಮಾ ಅವರ ಕುತ್ತಿಗೆಯಿಂದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರಿಬ್ಬರನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಂಗಳೂರು ಚೆಂಬುಗುಡ್ಡೆಯ ಹಬೀಬ್ ಹಸನ್ ಯಾನೆ ಹಬ್ಬಿ ಹಾಗೂ ಬಂಟ್ವಾಳ ತಾಲೂಕು ಪರ್ಲಿಯಾ ಕ್ರಾಸ್ ರೋಡ್ ನ ಉಮ್ಮರ್ ಸಿಯಾಫ್ ಯಾನೆ ಚಿಯಾ ಬಂಧನಕ್ಕೊಳಗಾಗಿರುವ ಕಳ್ಳರು.

ಹಬ್ಬಿ ವಿರುದ್ಧ ಉಭಯ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಸುಮಾರು 44 ಪ್ರಕರಣಗಳಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಹಲವು ವಾರಂಟ್ ಗಳಿತ್ತು. ಚಿಯಾ ನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಮಹಿಳೆಯರ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾಗಿದ್ದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಜಾಡು ಹಿಡಿದು ಕಳೆದ ಕೆಲ ದಿನಗಳಿಂದ ವಿವಿಧ ರೀತಿಗಳಲ್ಲಿ ಶೋಧ ನಡೆಸಿದ್ದ ಪೊಲೀಸರ ಬಲೆಗೆ ಕೊನೆಗೂ ಕಳ್ಳರು ಸಿಕ್ಕಿಬಿದ್ದಿದ್ದಾರೆ.

‌‌ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 2,50,000 ಆಗಿದೆ.

ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿ.ಸಿ.ಪಿ. ಯವರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ಹಾಗೂ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಗಿದೆ.

ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ. ಗಳಾದ ಪ್ರಶಾಂತ್, ಮೋಹನ್ ದಾಸ್ ಕೋಟ್ಯಾನ್, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಹುಸೇನ್, ಅಖಿಲ್ ಅಹ್ಮದ್, ನಾಗರಾಜ್ ಹಾಗೂ ವೆಂಕಟೇಶ್ ಅವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 hour ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 hour ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago