ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ತಂದೆಗೆ ಮಗನಿಂದಲೇ ಕಿಡ್ನಿ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ರೋಬೋಟ್‌ ಸಹಾಯದಿಂದ ಯಶಸ್ವಿ ಕಿಡ್ನಿ ಕಸಿ

ಬೆಂಗಳೂರು: ಕೊನೆಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 61 ವರ್ಷದ ತನ್ನ ತಂದೆಗೆ ಸ್ವತಃ ಮಗನೇ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ಯಶಸ್ವಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಕನ್ನಿಂಗ್‌ಹ್ಯಾಮ್‌ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ರೋಬೋಟಿಕ್‌ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ, ಕಿಡ್ನಿ ಟ್ರಾನ್ಸ್‌ಪ್ಲಾಂಟ್, ಮತ್ತು ರೊಬೊಟಿಕ್ ಸರ್ಜರಿ ನಿರ್ದೇಶಕರಾದ ಡಾ.ಮೋಹನ್ ಕೇಶವಮೂರ್ತಿ, ಆಫ್ರಿಕಾ ಮೂಲದ 61 ವರ್ಷದ ಬೆನ್ಸನ್ ಎಂಬುವವರು ಸ್ವತಃ ವೈದ್ಯರಾಗಿದ್ದು. 6-7 ತಿಂಗಳಿಂದ ಕೊನೆಯ ಹಂತದ ಮೂತ್ರಪಿಂಡ ಕಾಯಿಲೆ (ESRD)ಗೆ ತುತ್ತಾಗಿದ್ದಾರೆ, ಅಷ್ಟೇ ಅಲ್ಲದೆ, ಇವರು ೧೩೦ ಕೆ.ಜಿ. ತೂಕ ಹೊಂದಿದ್ದರಿಂದ ಸ್ಥೂಲಕಾಯತೆಯಿಂದಲೂ ಬಳಲುತ್ತಿದ್ದರು. ತನ್ನ ವಿಫಲವಾದ ಮೂತ್ರಪಿಂಡದ ಕಾರ್ಯವನ್ನು ನಿರ್ವಹಿಸಲು ನಿಯಮಿತ ಹಿಮೋಡಯಾಲಿಸಿಸ್ ಅನ್ನು ಅವಲಂಬಿಸಿದ್ದರು. ಅಧಿಕ ರಕ್ತದೊತ್ತಡವು ಇವರ ಆರೋಗ್ಯ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿತ್ತು. ಹಲವು ದೇಶಗಳಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿದರೂ ಇವರ ಸ್ಥೂಲಕಾಯತೆಯಿಂದ ಮೂತ್ರಪಿಂಡದ ಕಸಿ ಅಸಾಧ್ಯವೆಂದು ಆಸ್ಪತ್ರೆಗಳು ನಿರಾಕರಿಸಿದ್ದವು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಬಳಿಕ ಅವರನ್ನು ಸಂಪೂರ್ಣವಾಗಿ ವೈದ್ಯಕೀಯ ಮೌಲ್ಯಮಾಪನ ನಡೆಸಿ, ಅವರಿಗೆ ರೋಬೋಟ್‌ ನೆರವಿನಿಂದ ಮಾತ್ರ ಕಿಡ್ನಿ ಕಸಿ ಮಾಡಲು ಸಾಧ್ಯವೆಂದು ತಿಳಿಯಿತು. ಅವರ 23 ವರ್ಷದ ಮಗ ತನ್ನ ಆರೋಗ್ಯವಂತ ಕಿಡ್ನಿಯನ್ನೇ ದಾನ ಮಾಡುವುದಾಗಿ ಮುಂದಾದರು. ತಂದೆ ಹಾಗೂ ಮಗನ ಕಿಡ್ನಿ ಹೊಂದಾಣಿಯಾದ ಕಾರಣ ರೋಬೋಟ್‌ ಸಹಾಯದಿಂದ ಕಸಿ ಮಾಡಲಾಯಿತು ಎಂದು ವಿವರಿಸಿದರು.

ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ, ಆಂಡ್ರಾಲಜಿ, ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಶಾಕಿರ್ ತಬ್ರೇಜ್ ಮಾತನಾಡಿ, ರೋಗಿಯ ಸ್ಥೂಲಕಾಯತೆ, ಅಧಿಕ ರಕ್ತದೊತ್ತಡ ಹಾಗೂ ದೀರ್ಘಕಾಲದಿಂದ ನಡೆಸಿದ ಡಯಾಲಿಸಿಸ್‌ ಶಸ್ತ್ರಚಿಕಿತ್ಸೆಗೆ ಸವಾಲಾಗಿತ್ತು. ಆದರೆ, ರೋಬೋಟ್‌ ಸಹಾಯದಿಂದ 3D ದೃಶ್ಯೀಕರಣದ ಮೂಖೇನ ನಿಖರ ಛೇದನ ಹಾಗೂ ಕಸಿ ಮಾಡಲು ಸಾಧ್ಯವಾಯಿತು. ತೆರೆದ ಕಸಿ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ, ರೋಬೋಟಿಕ್‌ ಸಹಾಯದಿಂದ ನಡೆಸುವ ಶಸ್ತ್ರಚಿಕಿತ್ಸೆ ಹೆಚ್ಚು ಸುರಕ್ಷಿತ, ಕಡಿಮೆ ರಕ್ತದ ನಷ್ಟ ಹಾಗೂ ವೇಗವಾಗಿ ಚೇತರಿಕೆಗೆ ಸಹಕಾರಿಯಾಗಲಿದೆ, ಜೊತೆಗೆ, ದೀರ್ಘಕಾಲೀನ ತೊಡಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಸುಮಾರು ಎರಡೂವರೆ ಗಂಟೆಗಳ ಕಾಲ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದಾದ 72 ಗಂಟೆಗಳಲ್ಲಿ ಅವರ ಮೂತ್ರಪಿಂಡದ ಕಾರ್ಯವು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು, ಅವರ ಕ್ರಿಯೇಟಿನೈನ್ ಮಟ್ಟವು ಸ್ಥಿರವಾಗಿತ್ತು ಎಂದು ವಿವರಿಸಿದರು.

ಈ ವೇಳೆ ಮಾತನಾಡಿದ ರೋಗಿ ಡಾ. ಬೆನ್ಸನ್, ಕೊನೆ ಹಂತದ ಮೂತ್ರಪಿಂಡದ ವೈಫಲ್ಯಕ್ಕೆ ಸೂಕ್ತರೀತಿಯಲ್ಲಿ ಮಾರ್ಗದರ್ಶನ ನೀಡಿ, ರೋಬೋಟ್‌ ಸಹಾಯದಿಂದ ಕಸಿ ಮಾಡಿದ ಎಲ್ಲಾ ವೈದ್ಯರಿಗೂ ನಾನು ಕೃತಜ್ಞನಾಗಿದ್ದೇನೆ. ಎಲ್ಲಿಯೂ ನನಗೆ ಚಿಕಿತ್ಸೆ ಸಿಗುವ ಭರವಸೆ ಸಿಗಲಿಲ್ಲ, ಆದರೆ ಇಲ್ಲಿ, ನನ್ನ ದೈಹಿಕ ಸ್ಥಿತಿ ತಿಳಿದಿದ್ದರೂ ಸೂಕ್ತ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಕಸಿ ನಡೆಸಿದರು. ಈ ವೈದ್ಯರು ಜೀವನದಲ್ಲಿ ನನಗೆ ಎರಡನೇ ಅವಕಾಶ ನೀಡಿದ್ದಾರೆ. ನನಗಾಗಿ ಕಿಡ್ನಿ ದಾನ ಮಾಡಿದ ಮಗನ ಔದಾರ್ಯಕ್ಕೆ ನಾನು ಸದಾ ಋಣಿ ಎಂದು ಹೇಳಿದರು.

Ramesh Babu

Journalist

Recent Posts

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

5 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

5 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

15 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

16 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

16 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

20 hours ago