ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು: ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು-ಎ.ಬಿ ಬಸವರಾಜು

ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ 2 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಪಿ -ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಸಿ/ ಎಸ್.ಟಿ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತನಿಖೆ ಚುರುಕಾಗಬೇಕು. ಪೊಲೀಸ್ ಇಲಾಖೆ ಪ್ರಕರಣಗಳ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡುವುದರ ಮೂಲಕ ಸಕಾಲದಲ್ಲಿ ಸಂತ್ರಸ್ತರಿಗೆ ಪರಿಹಾರ ಧನ ನೀಡಲು ಸಹಾಯವಾಗುತ್ತದೆ. ಪ್ರಕರಣಗಳ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಶೀಘ್ರ ನ್ಯಾಯ ಸಿಕ್ಕರೆ ದೌರ್ಜನ್ಯ ಪ್ರಕರಣಗಳು ಮರುಕಳಿಸುವುದನ್ನು ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಉಪವಿಭಾಗ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಕುಂದು ಕೊರತೆ ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಬಗೆಹರಿಸಿ. ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಾಗೃತಿ ಸಮಿತಿಯ ಸದಸ್ಯರನ್ನು ಆಹ್ವಾನಿಸಿ ಎಂದರು.

*6 ದೌರ್ಜನ್ಯ ಪ್ರಕರಣಗಳು ದಾಖಲು*

ಜಿಲ್ಲೆಯಲ್ಲಿ ಏಪ್ರಿಲ್ 01 ರಿಂದ ಜೂನ್ 22 ರವರೆಗೆ 06 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಲಾಗುವುದು ಎಂದರು.

ಸಫಾಯಿ ಕರ್ಮಚಾರಿಗಳಿಗೆ ತಾವು ಮಾಡುವ ವೃತ್ತಿಯಲ್ಲಿ ಅನುಸರಿಸಬೇಕಾದ ಸುರಕ್ಷತೆ ಕ್ರಮಗಳ ಬಗ್ಗೆ ಅರಿವು ಇರುವುದಿಲ್ಲ, ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸಿ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಎಂದರು.

ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ, ವಸತಿ ಹಂಚಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

*ಕ್ರಿಯಾ ಯೋಜನೆ ರೂಪಿಸಲು ಸೂಚನೆ*

2025-26 ನೇ ಸಾಲಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಶೀಘ್ರ ಅನುಮೋದನೆ ಪಡೆಯಲು ಅಧಿಕಾರಿಗಳಿಗೆ ಡಿ.ಸಿ ಸೂಚಿಸಿದರು.

ಸಭೆಯಲ್ಲಿ ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರಾದ ರಮೇಶ್, ಡಿವೈಎಸ್ಪಿ ರವಿ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಪಿ.ಇ.ಎಂ.ಎಸ್ ಮತ್ತು ಆರ್ ಆಕ್ಟ್-2013 ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

11 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

18 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

21 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

21 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago