ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು: ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು-ಎ.ಬಿ ಬಸವರಾಜು

ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ 2 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಪಿ -ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಸಿ/ ಎಸ್.ಟಿ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತನಿಖೆ ಚುರುಕಾಗಬೇಕು. ಪೊಲೀಸ್ ಇಲಾಖೆ ಪ್ರಕರಣಗಳ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡುವುದರ ಮೂಲಕ ಸಕಾಲದಲ್ಲಿ ಸಂತ್ರಸ್ತರಿಗೆ ಪರಿಹಾರ ಧನ ನೀಡಲು ಸಹಾಯವಾಗುತ್ತದೆ. ಪ್ರಕರಣಗಳ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಶೀಘ್ರ ನ್ಯಾಯ ಸಿಕ್ಕರೆ ದೌರ್ಜನ್ಯ ಪ್ರಕರಣಗಳು ಮರುಕಳಿಸುವುದನ್ನು ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಉಪವಿಭಾಗ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಕುಂದು ಕೊರತೆ ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಬಗೆಹರಿಸಿ. ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಾಗೃತಿ ಸಮಿತಿಯ ಸದಸ್ಯರನ್ನು ಆಹ್ವಾನಿಸಿ ಎಂದರು.

*6 ದೌರ್ಜನ್ಯ ಪ್ರಕರಣಗಳು ದಾಖಲು*

ಜಿಲ್ಲೆಯಲ್ಲಿ ಏಪ್ರಿಲ್ 01 ರಿಂದ ಜೂನ್ 22 ರವರೆಗೆ 06 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಲಾಗುವುದು ಎಂದರು.

ಸಫಾಯಿ ಕರ್ಮಚಾರಿಗಳಿಗೆ ತಾವು ಮಾಡುವ ವೃತ್ತಿಯಲ್ಲಿ ಅನುಸರಿಸಬೇಕಾದ ಸುರಕ್ಷತೆ ಕ್ರಮಗಳ ಬಗ್ಗೆ ಅರಿವು ಇರುವುದಿಲ್ಲ, ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸಿ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಎಂದರು.

ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ, ವಸತಿ ಹಂಚಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

*ಕ್ರಿಯಾ ಯೋಜನೆ ರೂಪಿಸಲು ಸೂಚನೆ*

2025-26 ನೇ ಸಾಲಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಶೀಘ್ರ ಅನುಮೋದನೆ ಪಡೆಯಲು ಅಧಿಕಾರಿಗಳಿಗೆ ಡಿ.ಸಿ ಸೂಚಿಸಿದರು.

ಸಭೆಯಲ್ಲಿ ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರಾದ ರಮೇಶ್, ಡಿವೈಎಸ್ಪಿ ರವಿ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಪಿ.ಇ.ಎಂ.ಎಸ್ ಮತ್ತು ಆರ್ ಆಕ್ಟ್-2013 ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

12 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

12 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

15 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

15 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

20 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

24 hours ago