ಮೂರು ತಿಂಗಳಲ್ಲಿ 11 ದೌರ್ಜನ್ಯ ಪ್ರಕರಣಗಳು ದಾಖಲು

ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ 4 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವ ಪ್ರಯತ್ನ ಮಾಡಬೇಕು. ದೌರ್ಜನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಏರ್ಪಡಿಸಿಸಬೇಕು ಎಂದರು.

*11 ದೌರ್ಜನ್ಯ ಪ್ರಕರಣ ದಾಖಲು*

ಅಕ್ಟೋಬರ್ 1 ರಿಂದ ಇಲ್ಲಿಯವರೆಗೂ ಒಟ್ಟು 11 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 11 ಪ್ರಕರಣಗಳಲ್ಲಿ ನೊಂದ 20 ಸಂತ್ರಸ್ತರಿಗೆ ಒಟ್ಟು 5.85 ಲಕ್ಷ ರೂ.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

*ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ*

ನಗರ ಪ್ರದೇಶಗಳಲ್ಲಿ ನಿವೇಶನ, ಮನೆ ಒದಗಿಸಲು ಮೊದಲ ಆದ್ಯತೆಯಾಗಿ ಸಫಾಯಿ ಕರ್ಮಚಾರಿಗಳನ್ನು ಪರಿಗಣಿಸಲಾಗುವುದು ಮನೆಗಳಿಲ್ಲದೆ ಇರುವ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನು ಶೀಘ್ರವಾಗಿ ಒದಗಿಸಲಾಗುವುದು. ಅವರ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಕೆಲಸಕ್ಕೆ ಬೇಕಾಗುವ ಅಗತ್ಯ ಪರಿಕರಗಳನ್ನು ಅವರಿಗೆ ಒದಗಿಸುವುದರ ಜೊತೆಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಿ ಎಂದರು.

ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತಾನಾಡಿ ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು. ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿರುತ್ತದೆ ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡಿದರೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಿ ರಕ್ಷಣೆ ನೀಡಿ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗುತ್ತದೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

3 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

5 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

17 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

17 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

17 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

19 hours ago