ಇದು ತಾಲ್ಲೂಕಿನ ರೈತರೇ ಓಡಾಡುವ ಪ್ರಮುಖ ರಸ್ತೆ, ನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸಲು ಇರುವ ಏಕೈಕ ಮಾರ್ಗ. ಸಾಸಲು, ಆರೂಢಿ ಭಾಗದ ಜನತೆಯ ಜೀವನಾಡಿ ಇದ್ದಂತೆ. ಅಂತಹ ರಸ್ತೆಯ ದೊಡ್ಡಹಳ್ಳ ಸಮೀಪದಿಂದ ಗುಂಡಮಗೆರೆ-ಹೊಸಹಳ್ಳಿ ಮಾರ್ಗವಾಗಿ ಹಲವು ದಶಕಗಳ ನಂತರ ಡಾಂಬರು ಕೆಲಸ ನಡೆಯುತ್ತಿದೆ. ಆದರೆ ಗುತ್ತಿಗೆದಾರ ಕಾರನಾಳ ಅಶ್ವಥನಾರಾಯಣ ಅವಾಂತರಕ್ಕೆ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ಬೇಗ ಮುಗಿಸುವಂತೆ ಹೇಳಿದ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ ಅವರಿಗೂ ಡೋಂಟ್ ಕೇರ್ ಎಂಬಂತೆ ದುರಂಹಕಾರದಿಂದ ಉತ್ತರ ನೀಡಿದ್ದಾರೆ.
ರಸ್ತೆಯ ಅಧ್ವಾನದ ಕುರಿತು ವರದಿ ಮಾಡಲು ಪಬ್ಲಿಕ್ ಮಿರ್ಚಿ ಸಂಪದಾಕರು ಗುತ್ತಿಗೆದಾರ ಕಾರನಾಳ ಅಶ್ವಥನಾರಾಯಣಗೆ ದೂರುವಾಣಿ ಕರೆ ಮಾಡಿ ‘ಈ ರಸ್ತೆ ಕಾಮಗಾರಿ ಇಷ್ಟು ನಿಧಾನವಾಗಿ ನಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅಪಘಾತಗಳು ಆಗುತ್ತಿವೆ ಎಂದು ಸಾರ್ವಜನಿಕರ ಪರ ಕಳಕಳಿ ವ್ಯಕ್ತಪಡಿಸಿದರೆ, ಗುತ್ತಿಗೆದಾರ ನೀನ್ಯಾರು ಕೇಳಲಿಕ್ಕೆ, ನನ್ನತ್ರ
ದುಡ್ಡಿಲ್ಲ, ದುಡ್ಡು ಬಂದಾಗ ಮಾಡುತ್ತೇನೆ ಎಂದು ದರ್ಪ ಮೆರೆದಿದ್ದಾನೆ.
ಇನ್ನು ದಿನಾಂಕ 24-10-2025ರಂದು ಕಾಮಗಾರಿ ಪ್ರಾರಂಭ ಮಾಡಲಾಗಿದ್ದು, ಇದೂವರೆಗೂ ಮುಕ್ತಾಯಗೊಳಿಸದೇ ಮೀನಾಮೇಷ ಎಣಿಸಲಾಗುತ್ತಿದೆ…
ಗುತ್ತಿಗೆದಾರ ಕಾಮಗಾರಿ ಪೂರ್ಣಗೊಳಿಸದ ಕಾರಣ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಧೂಳು ಕುಡಿದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಪಘಾತಗಳು ಸಂಭವಿಸುತ್ತಿವೆ. ಮೇಲಾಗಿ ರಸ್ತೆ ಅಕ್ಕಪಕ್ಕದ ಹೊಲಗಳ ಬೆಳೆಗಳಿಗೆ ಸಮಸ್ಯೆ ಎದುರಾಗಿದೆ ಎಂದು ಹೊಸಹಳ್ಳಿ ಗ್ರಾಮಸ್ಥರು ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಗುಂಡಮಗೆರೆ ರಸ್ತೆಯ ಬಂಡಿಹಳ್ಳದಿಂದ ಹೊಸಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ(3.70KM) ಸಂಪೂರ್ಣ ಗುಂಡಿ ಬಿದ್ದು ಹಾಳಾಗಿತ್ತು. ಈ ಭಾಗದ ಜನರ ಅನುಕೂಲಕ್ಕಾಗಿ ಕೆಲವು ತಿಂಗಳ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭ ಮಾಡಲಾಗಿತ್ತು. ರಸ್ತೆಗೆ ಜಲ್ಲಿಕಲ್ಲು ಹಾಕಲಾಗಿದೆ ಅಷ್ಟೇ. ಸಂಪೂರ್ಣವಾಗಿ ಕೆಲಸ ಪೂರ್ಣಗೊಳಿಸಲು ಗುತ್ತಿಗೆದಾರ ಹಿಂದೇಟು ಹಾಕುತ್ತಿರುವುದರಿಂದ ಕಾಮಗಾರಿ ನೆನಗುದಿಗೆ ಬಿದ್ದಿದೆ. ಇದರಿಂದಾಗಿ ಈ ರಸ್ತೆಯ ಇಕ್ಕೆಲಗಳಲ್ಲಿರುವ ಹೊಲಗಳು, ಈ ರಸ್ತೆಯಲ್ಲಿ ಪ್ರತಿನಿತ್ಯ ಓಡಾಡುವ ವಾಹನ ಸವಾರರು ನರಕಯಾತನೆ ಅನುಭವಿಸಲಾಗುತ್ತಿದೆ…
ಈ ರಸ್ತೆ ಕಾಮಗಾರಿ ಪ್ರಾರಂಭವಾದಗಿನಿಂದಲೂ ಇದೂವರೆಗೂ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದೆ. ಪ್ರತಿನಿತ್ಯ ಒಂದಾದರೂ ಅಪಘಾತಗಳು ಸಂಭವಿಸುತ್ತಿವೆ.
ಈ ಕುರಿತು ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ.ಲಕ್ಷ್ಮೀಪತಿ ಪ್ರತಿಕ್ರಿಯಿಸಿ, ಗುತ್ತಿಗೆದಾರ ದರ್ಪ ಮೆರೆದಿದ್ದರೆ ನಾವು ಖಂಡಿಸುತ್ತೇವೆ. ಸರ್ಕಾರ ಹಣ ಕೊಟ್ಟಿಲ್ಲ ಅಂತಾ ಹೇಳಬಾರದು, ಕಾಮಗಾರಿ ಪೂರ್ಣಗೊಂಡ ನಂತರ ಸರ್ಕಾರ ಹಣ ಬಿಡುಗಡೆ ಮಾಡೋದು. ಕಾಮಗಾರಿ ವಿಳಂಬಕ್ಕೆ ಸಕಾರಣ ನೀಡಬೇಕೆ ಹೊರೆತು ದುರಾಹಂಕಾರ ಮಾತುಗಳನ್ನಾಡುವುದು ಸರಿಯಲ್ಲ ಎಂದು ಹೇಳಿದರು….
ಇಂತಹ ದುರಾಹಂಕಾರಿ, ಬೆಜವಾಬ್ದಾರಿ, ನಿರ್ಲಕ್ಷ್ಯ ವಹಿಸುತ್ತಿರುವ ಗುತ್ತಿಗೆದಾರ ಕಾರನಾಳ ಅಶ್ವಥನಾರಾಯಣ ವಿರುದ್ಧ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…