ದೊಡ್ಡಬಳ್ಳಾಪುರ : ಸಂಡೂರು, ಶಿಂಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ತಕ್ಕ ಉತ್ತರವನ್ನ ನೀಡಿದೆ. ಗ್ಯಾರಂಟಿ ಯೋಜನೆಗಳ ಕುಹಕವಾಡುತ್ತಿದ್ದ ಮೈತ್ರಿ ಪಕ್ಷಗಳಿಗೆ ಮಹಿಳಾ ಮತದಾರರು ಪಾಠ ಕಲಿಸಿದ್ದಾರೆಂದು ಎಂದು ಹೇಳಿದರು.
ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರ ಕೊಡುಗೆ, ಡಿಕೆ.ಶಿವಕುಮಾರ್ ರವರ ಪರಿಶ್ರಮ ಮತ್ತು ಚುನಾವಣೆಯಲ್ಲಿ ದುಡಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವೆ ಎಂದರು.
ಮುಡಾ ಪ್ರಕರಣವನ್ನ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸರ್ಕಾರವನ್ನ ಬೀಳಿಸುವ ಯತ್ನ ನಡೆಸುತ್ತಿದ್ದಾರೆ. ಆದರೆ, ರಾಜ್ಯದ ಜನತೆ ವಿರೋಧ ಪಕ್ಷಗಳ ಸುಳ್ಳು ಆರೋಪಗಳ ಬೆಲೆ ಕೊಡದೆ ಅಭಿವೃದ್ಧಿ ಕಾರ್ಯಗಳನ್ನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತೆ ತನ್ನ ಒಲವು ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದಿಸಿದ್ದಾರೆ ಎಂದರು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ತಂದೆ ಯಡಿಯೂರಪ್ಪನವರ ಹಾದಿಯಲ್ಲಿ ನಡೆಯುತ್ತಿಲ್ಲ. ತಂದೆಯಂತೆ ಅವರಿಗೆ ವರ್ಚಸಿಲ್ಲ, ಇನ್ನೂ ಕುಮಾರಸ್ವಾಮಿಯವರಿಗೆ ಆಸೆ ಅಲ್ಲ ದುರಾಸೆ ಇದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಬದಲಿಗೆ ತಮ್ಮ ಮಗನಿಗೆ ಟಿಕೆಟ್ ನೀಡಿದ್ದಾರೆ. ಆದರೆ, ಕುಟುಂಬ ರಾಜಕಾರಣವನ್ನ ವಿರೋಧಿಸುವ ಮೂಲಕ ಕುಮಾರಸ್ವಾಮಿ ಕುಟುಂಬಕ್ಕೆ ತಕ್ಕ ಉತ್ತರವನ್ನ ನೀಡಿದ್ದಾರೆ ಎಂದರು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…