ದೊಡ್ಡಬಳ್ಳಾಪುರ : ಸಂಡೂರು, ಶಿಂಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ತಕ್ಕ ಉತ್ತರವನ್ನ ನೀಡಿದೆ. ಗ್ಯಾರಂಟಿ ಯೋಜನೆಗಳ ಕುಹಕವಾಡುತ್ತಿದ್ದ ಮೈತ್ರಿ ಪಕ್ಷಗಳಿಗೆ ಮಹಿಳಾ ಮತದಾರರು ಪಾಠ ಕಲಿಸಿದ್ದಾರೆಂದು ಎಂದು ಹೇಳಿದರು.
ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರ ಕೊಡುಗೆ, ಡಿಕೆ.ಶಿವಕುಮಾರ್ ರವರ ಪರಿಶ್ರಮ ಮತ್ತು ಚುನಾವಣೆಯಲ್ಲಿ ದುಡಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವೆ ಎಂದರು.
ಮುಡಾ ಪ್ರಕರಣವನ್ನ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸರ್ಕಾರವನ್ನ ಬೀಳಿಸುವ ಯತ್ನ ನಡೆಸುತ್ತಿದ್ದಾರೆ. ಆದರೆ, ರಾಜ್ಯದ ಜನತೆ ವಿರೋಧ ಪಕ್ಷಗಳ ಸುಳ್ಳು ಆರೋಪಗಳ ಬೆಲೆ ಕೊಡದೆ ಅಭಿವೃದ್ಧಿ ಕಾರ್ಯಗಳನ್ನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತೆ ತನ್ನ ಒಲವು ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದಿಸಿದ್ದಾರೆ ಎಂದರು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರ ತಂದೆ ಯಡಿಯೂರಪ್ಪನವರ ಹಾದಿಯಲ್ಲಿ ನಡೆಯುತ್ತಿಲ್ಲ. ತಂದೆಯಂತೆ ಅವರಿಗೆ ವರ್ಚಸಿಲ್ಲ, ಇನ್ನೂ ಕುಮಾರಸ್ವಾಮಿಯವರಿಗೆ ಆಸೆ ಅಲ್ಲ ದುರಾಸೆ ಇದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಬದಲಿಗೆ ತಮ್ಮ ಮಗನಿಗೆ ಟಿಕೆಟ್ ನೀಡಿದ್ದಾರೆ. ಆದರೆ, ಕುಟುಂಬ ರಾಜಕಾರಣವನ್ನ ವಿರೋಧಿಸುವ ಮೂಲಕ ಕುಮಾರಸ್ವಾಮಿ ಕುಟುಂಬಕ್ಕೆ ತಕ್ಕ ಉತ್ತರವನ್ನ ನೀಡಿದ್ದಾರೆ ಎಂದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…