ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಸಿಂಹನಹಳ್ಳಿ ಗ್ರಾಮ ಸಂಪೂರ್ಣ ನೀರಿನಲ್ಲಿ ಮುಳುಗಿದೆ, ಇನ್ನು ರಸ್ತೆಗಳೆಲ್ಲ ಗುಂಡಿಮಯವಾಗಿವೆ. ಚರಂಡಿಗಳು ತುಂಬಿ ತುಳುಕುತ್ತಿವೆ, ಶುದ್ಧ ನೀರಿನ ಘಟಕ ಕೆಟ್ಟುನಿಂತಿದೆ. ಬೀದಿ ದೀಪಗಳು ಬೆಳಕು ನೀಡದೇ ಮಂಕಾಗಿವೆ. ಒಟ್ಟಿನಲ್ಲಿ ಈ ಗ್ರಾಮ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗುತ್ತಿದೆ.
ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಿ ಅಭಿವೃದ್ಧಿ ಮಾಡುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಜನಪ್ರತಿನಿಧಿಗಳು ಜನರಿಂದ ಮತ ಪಡೆದು ಫುಲ್ ಜಾಲಿಯಾಗಿದ್ದಾರೆ.
ಈ ಗ್ರಾಮ ಗ್ರಾಮ ಪಂಚಾಯಿತಿಗೆ ಕೂಗಳತೆ ದೂರದಲ್ಲಿದೆ. ಗ್ರಾಮದಲ್ಲಿ ಸುಮಾರು 80 ಕುಟುಂಬಗಳಿದ್ದು, 600ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕರ್ತವ್ಯ ಗ್ರಾಮ ಪಂಚಾಯಿತಿಗೆ ಇದೆ. ಆದರೆ, ಈಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಸಮಸ್ಯೆಗೂ ಸ್ಪಂಧಿಸುವುದಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಕುಡಿಯುವ ನೀರು ಇಲ್ಲದೇ ಜನ ಪರದಾಡುತ್ತಿದ್ದಾರೆ. ಸ್ವಚ್ಛತೆಯಿಲ್ಲದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ಸುಮಾರು 8-10 ಜನಕ್ಕೆ ಡೆಂಗ್ಯೂ ಜ್ವರ ಬಂದಿದೆ. ಗ್ರಾಮದ ಜನ ಜೀವನಗಳ ಜೊತೆ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳು ಚೆಲ್ಲಾಟವಾಡುತ್ತಿದ್ದಾರೆ. ಈಗಲಾದರೂ ಎಚ್ಚೆತ್ತು ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…