ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಸಿಂಹನಹಳ್ಳಿ ಗ್ರಾಮ ಸಂಪೂರ್ಣ ನೀರಿನಲ್ಲಿ ಮುಳುಗಿದೆ, ಇನ್ನು ರಸ್ತೆಗಳೆಲ್ಲ ಗುಂಡಿಮಯವಾಗಿವೆ. ಚರಂಡಿಗಳು ತುಂಬಿ ತುಳುಕುತ್ತಿವೆ, ಶುದ್ಧ ನೀರಿನ ಘಟಕ ಕೆಟ್ಟುನಿಂತಿದೆ. ಬೀದಿ ದೀಪಗಳು ಬೆಳಕು ನೀಡದೇ ಮಂಕಾಗಿವೆ. ಒಟ್ಟಿನಲ್ಲಿ ಈ ಗ್ರಾಮ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗುತ್ತಿದೆ.
ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಿ ಅಭಿವೃದ್ಧಿ ಮಾಡುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಜನಪ್ರತಿನಿಧಿಗಳು ಜನರಿಂದ ಮತ ಪಡೆದು ಫುಲ್ ಜಾಲಿಯಾಗಿದ್ದಾರೆ.
ಈ ಗ್ರಾಮ ಗ್ರಾಮ ಪಂಚಾಯಿತಿಗೆ ಕೂಗಳತೆ ದೂರದಲ್ಲಿದೆ. ಗ್ರಾಮದಲ್ಲಿ ಸುಮಾರು 80 ಕುಟುಂಬಗಳಿದ್ದು, 600ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕರ್ತವ್ಯ ಗ್ರಾಮ ಪಂಚಾಯಿತಿಗೆ ಇದೆ. ಆದರೆ, ಈಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಸಮಸ್ಯೆಗೂ ಸ್ಪಂಧಿಸುವುದಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ ಘಟಕ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಕುಡಿಯುವ ನೀರು ಇಲ್ಲದೇ ಜನ ಪರದಾಡುತ್ತಿದ್ದಾರೆ. ಸ್ವಚ್ಛತೆಯಿಲ್ಲದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ಸುಮಾರು 8-10 ಜನಕ್ಕೆ ಡೆಂಗ್ಯೂ ಜ್ವರ ಬಂದಿದೆ. ಗ್ರಾಮದ ಜನ ಜೀವನಗಳ ಜೊತೆ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳು ಚೆಲ್ಲಾಟವಾಡುತ್ತಿದ್ದಾರೆ. ಈಗಲಾದರೂ ಎಚ್ಚೆತ್ತು ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…