ಮೂಲಭೂತ ಸೌಕರ್ಯಗಳಿಲ್ಲದೇ ನಲುಗುತ್ತಿರುವ ನಾರಸಿಂಹನಹಳ್ಳಿ: ಗ್ರಾಮ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ: ಗ್ರಾಮಸ್ಥರ ಆಕ್ರೋಶ

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಸಿಂಹನಹಳ್ಳಿ ಗ್ರಾಮ ಸಂಪೂರ್ಣ ನೀರಿನಲ್ಲಿ ಮುಳುಗಿದೆ, ಇನ್ನು ರಸ್ತೆಗಳೆಲ್ಲ ಗುಂಡಿಮಯವಾಗಿವೆ. ಚರಂಡಿಗಳು ತುಂಬಿ ತುಳುಕುತ್ತಿವೆ, ಶುದ್ಧ ನೀರಿನ ಘಟಕ ಕೆಟ್ಟುನಿಂತಿದೆ. ಬೀದಿ ದೀಪಗಳು ಬೆಳಕು ನೀಡದೇ ಮಂಕಾಗಿವೆ. ಒಟ್ಟಿನಲ್ಲಿ ಈ ಗ್ರಾಮ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗುತ್ತಿದೆ.

ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಿ ಅಭಿವೃದ್ಧಿ ಮಾಡುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಜನಪ್ರತಿನಿಧಿಗಳು ಜನರಿಂದ ಮತ ಪಡೆದು ಫುಲ್ ಜಾಲಿಯಾಗಿದ್ದಾರೆ.

ಈ ಗ್ರಾಮ ಗ್ರಾಮ ಪಂಚಾಯಿತಿಗೆ ಕೂಗಳತೆ ದೂರದಲ್ಲಿದೆ. ಗ್ರಾಮದಲ್ಲಿ ಸುಮಾರು 80 ಕುಟುಂಬಗಳಿದ್ದು, 600ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕರ್ತವ್ಯ ಗ್ರಾಮ‌ ಪಂಚಾಯಿತಿಗೆ ಇದೆ. ಆದರೆ, ಈಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಸಮಸ್ಯೆಗೂ ಸ್ಪಂಧಿಸುವುದಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ‌ ಘಟಕ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಕುಡಿಯುವ ನೀರು ಇಲ್ಲದೇ ಜನ ಪರದಾಡುತ್ತಿದ್ದಾರೆ. ಸ್ವಚ್ಛತೆಯಿಲ್ಲದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ಸುಮಾರು 8-10 ಜನಕ್ಕೆ ಡೆಂಗ್ಯೂ ಜ್ವರ ಬಂದಿದೆ. ಗ್ರಾಮದ ಜನ ಜೀವನಗಳ ಜೊತೆ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳು ಚೆಲ್ಲಾಟವಾಡುತ್ತಿದ್ದಾರೆ. ಈಗಲಾದರೂ ಎಚ್ಚೆತ್ತು ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

15 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

17 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

17 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

17 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

19 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

23 hours ago