ಮೂಲಭೂತ ಸೌಕರ್ಯಗಳಿಲ್ಲದೇ ನಲುಗುತ್ತಿರುವ ನಾರಸಿಂಹನಹಳ್ಳಿ: ಗ್ರಾಮ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ: ಗ್ರಾಮಸ್ಥರ ಆಕ್ರೋಶ

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಸಿಂಹನಹಳ್ಳಿ ಗ್ರಾಮ ಸಂಪೂರ್ಣ ನೀರಿನಲ್ಲಿ ಮುಳುಗಿದೆ, ಇನ್ನು ರಸ್ತೆಗಳೆಲ್ಲ ಗುಂಡಿಮಯವಾಗಿವೆ. ಚರಂಡಿಗಳು ತುಂಬಿ ತುಳುಕುತ್ತಿವೆ, ಶುದ್ಧ ನೀರಿನ ಘಟಕ ಕೆಟ್ಟುನಿಂತಿದೆ. ಬೀದಿ ದೀಪಗಳು ಬೆಳಕು ನೀಡದೇ ಮಂಕಾಗಿವೆ. ಒಟ್ಟಿನಲ್ಲಿ ಈ ಗ್ರಾಮ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗುತ್ತಿದೆ.

ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಿ ಅಭಿವೃದ್ಧಿ ಮಾಡುವಲ್ಲಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಜನಪ್ರತಿನಿಧಿಗಳು ಜನರಿಂದ ಮತ ಪಡೆದು ಫುಲ್ ಜಾಲಿಯಾಗಿದ್ದಾರೆ.

ಈ ಗ್ರಾಮ ಗ್ರಾಮ ಪಂಚಾಯಿತಿಗೆ ಕೂಗಳತೆ ದೂರದಲ್ಲಿದೆ. ಗ್ರಾಮದಲ್ಲಿ ಸುಮಾರು 80 ಕುಟುಂಬಗಳಿದ್ದು, 600ಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕರ್ತವ್ಯ ಗ್ರಾಮ‌ ಪಂಚಾಯಿತಿಗೆ ಇದೆ. ಆದರೆ, ಈಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾವ ಸಮಸ್ಯೆಗೂ ಸ್ಪಂಧಿಸುವುದಿಲ್ಲ ಎಂದು ಇಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಶುದ್ಧಕುಡಿಯುವ ನೀರಿನ‌ ಘಟಕ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಕುಡಿಯುವ ನೀರು ಇಲ್ಲದೇ ಜನ ಪರದಾಡುತ್ತಿದ್ದಾರೆ. ಸ್ವಚ್ಛತೆಯಿಲ್ಲದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ಸುಮಾರು 8-10 ಜನಕ್ಕೆ ಡೆಂಗ್ಯೂ ಜ್ವರ ಬಂದಿದೆ. ಗ್ರಾಮದ ಜನ ಜೀವನಗಳ ಜೊತೆ ಪಂಚಾಯಿತಿ ಹಾಗೂ ಜನಪ್ರತಿನಿಧಿಗಳು ಚೆಲ್ಲಾಟವಾಡುತ್ತಿದ್ದಾರೆ. ಈಗಲಾದರೂ ಎಚ್ಚೆತ್ತು ಗ್ರಾಮಕ್ಕೆ ಮೂಲಭೂತ ಸವಲತ್ತುಗಳನ್ನು ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

12 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

13 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

16 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

21 hours ago