ಮೂವರು ಸರಗಳ್ಳರನ್ನು ವಶಕ್ಕೆ‌ ಪಡೆದ ಪೊಲೀಸರು: ಬಂಧಿತರಿಂದ‌ ಕದ್ದ ವಸ್ತುಗಳ ಜಪ್ತಿ

ಇತ್ತೀಚೆಗೆ ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿರುವವ ಕಳ್ಳರನ್ನು ಬಂಧಿಸಿದ ಪೊಲೀಸರು.

ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ‌ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೆದ್ದಲಪಾಳ್ಯ ಗ್ರಾಮದ‌ ನಿವಾಸಿ ಆರ್. ಸುಬ್ರಮಣ್ಯ( 24), ಗೆದ್ದಲಪಾಳ್ಯ ದಿನ್ನೆಯ‌ ನಿವಾಸಿ ಎನ್. ಪ್ರವೀಣ್ ಕುಮಾರ್ (19) ಹಾಗೂ ಪಾಲನಜೋಗಹಳ್ಳಿಯಲ್ಲಿ ವಾಸವಿರುವ ಜೊಮೆಟೊ ಡೆಲಿವರಿ ಬಾಯ್ ಎನ್. ಅಭಿಲಾಷ್(22) ಬಂಧಿತ ಆರೋಪಿಗಳು.

ಒಟ್ಟು 4( ನಗರ ಹಾಗೂ ಗ್ರಾಮಾಂತರ ಠಾಣೆಯ ತಲಾ ಎರಡು ಪ್ರಕರಣ) ಸರಗಳವು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಬಂಧಿತರಿಂದ ಸುಮಾರು 130 ಗ್ರಾಂ ತೂಕದ ನಾಲ್ಕು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ KA- 51-4404 ನೋಂದಣಿ ಸಂಖ್ಯೆಯ‌ ಬೈಕ್ ವಶಪಡಿಸಿಕೊಂಡಿದ್ದಾರೆ.

ಮೇ 15 ರಂದು ರಾತ್ರಿ 8 ರ ಸುಮಾರಿಗೆ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಚ್ಚಪ್ಪನಪೇಟೆಯಲ್ಲಿ ವೃದ್ಧೆ ಉಗುಮಬಾಯಿ ಅವರ ಬಳಿ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ‌ ಪುರುಷೋತ್ತಮ್ ಅವರು ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು.

ನಗರ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಅಪರಾಧ ವಿಭಾಗದ ಪಿಎಸ್‌ಐ ನಂಜುಂಡಯ್ಯ ಹಾಗೂ ಸಿಬ್ಬಂದಿಗಳಾದ ಪಾಂಡುರಂಗ, ಕರಾರ್ ಹುಸೇನ್, ವಸಂತಕುಮಾರ್, ಸುನಿಲ್ ಭಾಸಗಿ , ಹುಸೇನ್ ಸಾಬ್ ಕಂಕುರಿ ಹಾಗೂ ಯೋಗಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

5 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

15 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

17 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

18 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 day ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

1 day ago