ಮೂವರು ಸರಗಳ್ಳರನ್ನು ವಶಕ್ಕೆ‌ ಪಡೆದ ಪೊಲೀಸರು: ಬಂಧಿತರಿಂದ‌ ಕದ್ದ ವಸ್ತುಗಳ ಜಪ್ತಿ

ಇತ್ತೀಚೆಗೆ ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿರುವವ ಕಳ್ಳರನ್ನು ಬಂಧಿಸಿದ ಪೊಲೀಸರು.

ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ‌ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೆದ್ದಲಪಾಳ್ಯ ಗ್ರಾಮದ‌ ನಿವಾಸಿ ಆರ್. ಸುಬ್ರಮಣ್ಯ( 24), ಗೆದ್ದಲಪಾಳ್ಯ ದಿನ್ನೆಯ‌ ನಿವಾಸಿ ಎನ್. ಪ್ರವೀಣ್ ಕುಮಾರ್ (19) ಹಾಗೂ ಪಾಲನಜೋಗಹಳ್ಳಿಯಲ್ಲಿ ವಾಸವಿರುವ ಜೊಮೆಟೊ ಡೆಲಿವರಿ ಬಾಯ್ ಎನ್. ಅಭಿಲಾಷ್(22) ಬಂಧಿತ ಆರೋಪಿಗಳು.

ಒಟ್ಟು 4( ನಗರ ಹಾಗೂ ಗ್ರಾಮಾಂತರ ಠಾಣೆಯ ತಲಾ ಎರಡು ಪ್ರಕರಣ) ಸರಗಳವು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಬಂಧಿತರಿಂದ ಸುಮಾರು 130 ಗ್ರಾಂ ತೂಕದ ನಾಲ್ಕು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ KA- 51-4404 ನೋಂದಣಿ ಸಂಖ್ಯೆಯ‌ ಬೈಕ್ ವಶಪಡಿಸಿಕೊಂಡಿದ್ದಾರೆ.

ಮೇ 15 ರಂದು ರಾತ್ರಿ 8 ರ ಸುಮಾರಿಗೆ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಚ್ಚಪ್ಪನಪೇಟೆಯಲ್ಲಿ ವೃದ್ಧೆ ಉಗುಮಬಾಯಿ ಅವರ ಬಳಿ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ‌ ಪುರುಷೋತ್ತಮ್ ಅವರು ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು.

ನಗರ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಅಪರಾಧ ವಿಭಾಗದ ಪಿಎಸ್‌ಐ ನಂಜುಂಡಯ್ಯ ಹಾಗೂ ಸಿಬ್ಬಂದಿಗಳಾದ ಪಾಂಡುರಂಗ, ಕರಾರ್ ಹುಸೇನ್, ವಸಂತಕುಮಾರ್, ಸುನಿಲ್ ಭಾಸಗಿ , ಹುಸೇನ್ ಸಾಬ್ ಕಂಕುರಿ ಹಾಗೂ ಯೋಗಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

2 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

7 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

18 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

18 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

22 hours ago