ಮೂವರು ಸರಗಳ್ಳರನ್ನು ವಶಕ್ಕೆ‌ ಪಡೆದ ಪೊಲೀಸರು: ಬಂಧಿತರಿಂದ‌ ಕದ್ದ ವಸ್ತುಗಳ ಜಪ್ತಿ

ಇತ್ತೀಚೆಗೆ ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿರುವವ ಕಳ್ಳರನ್ನು ಬಂಧಿಸಿದ ಪೊಲೀಸರು.

ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ‌ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೆದ್ದಲಪಾಳ್ಯ ಗ್ರಾಮದ‌ ನಿವಾಸಿ ಆರ್. ಸುಬ್ರಮಣ್ಯ( 24), ಗೆದ್ದಲಪಾಳ್ಯ ದಿನ್ನೆಯ‌ ನಿವಾಸಿ ಎನ್. ಪ್ರವೀಣ್ ಕುಮಾರ್ (19) ಹಾಗೂ ಪಾಲನಜೋಗಹಳ್ಳಿಯಲ್ಲಿ ವಾಸವಿರುವ ಜೊಮೆಟೊ ಡೆಲಿವರಿ ಬಾಯ್ ಎನ್. ಅಭಿಲಾಷ್(22) ಬಂಧಿತ ಆರೋಪಿಗಳು.

ಒಟ್ಟು 4( ನಗರ ಹಾಗೂ ಗ್ರಾಮಾಂತರ ಠಾಣೆಯ ತಲಾ ಎರಡು ಪ್ರಕರಣ) ಸರಗಳವು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಬಂಧಿತರಿಂದ ಸುಮಾರು 130 ಗ್ರಾಂ ತೂಕದ ನಾಲ್ಕು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ KA- 51-4404 ನೋಂದಣಿ ಸಂಖ್ಯೆಯ‌ ಬೈಕ್ ವಶಪಡಿಸಿಕೊಂಡಿದ್ದಾರೆ.

ಮೇ 15 ರಂದು ರಾತ್ರಿ 8 ರ ಸುಮಾರಿಗೆ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಚ್ಚಪ್ಪನಪೇಟೆಯಲ್ಲಿ ವೃದ್ಧೆ ಉಗುಮಬಾಯಿ ಅವರ ಬಳಿ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ‌ ಪುರುಷೋತ್ತಮ್ ಅವರು ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು.

ನಗರ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಅಪರಾಧ ವಿಭಾಗದ ಪಿಎಸ್‌ಐ ನಂಜುಂಡಯ್ಯ ಹಾಗೂ ಸಿಬ್ಬಂದಿಗಳಾದ ಪಾಂಡುರಂಗ, ಕರಾರ್ ಹುಸೇನ್, ವಸಂತಕುಮಾರ್, ಸುನಿಲ್ ಭಾಸಗಿ , ಹುಸೇನ್ ಸಾಬ್ ಕಂಕುರಿ ಹಾಗೂ ಯೋಗಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

3 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

5 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

6 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

23 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago