ಇತ್ತೀಚೆಗೆ ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿರುವವ ಕಳ್ಳರನ್ನು ಬಂಧಿಸಿದ ಪೊಲೀಸರು.
ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೆದ್ದಲಪಾಳ್ಯ ಗ್ರಾಮದ ನಿವಾಸಿ ಆರ್. ಸುಬ್ರಮಣ್ಯ( 24), ಗೆದ್ದಲಪಾಳ್ಯ ದಿನ್ನೆಯ ನಿವಾಸಿ ಎನ್. ಪ್ರವೀಣ್ ಕುಮಾರ್ (19) ಹಾಗೂ ಪಾಲನಜೋಗಹಳ್ಳಿಯಲ್ಲಿ ವಾಸವಿರುವ ಜೊಮೆಟೊ ಡೆಲಿವರಿ ಬಾಯ್ ಎನ್. ಅಭಿಲಾಷ್(22) ಬಂಧಿತ ಆರೋಪಿಗಳು.
ಒಟ್ಟು 4( ನಗರ ಹಾಗೂ ಗ್ರಾಮಾಂತರ ಠಾಣೆಯ ತಲಾ ಎರಡು ಪ್ರಕರಣ) ಸರಗಳವು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಬಂಧಿತರಿಂದ ಸುಮಾರು 130 ಗ್ರಾಂ ತೂಕದ ನಾಲ್ಕು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ KA- 51-4404 ನೋಂದಣಿ ಸಂಖ್ಯೆಯ ಬೈಕ್ ವಶಪಡಿಸಿಕೊಂಡಿದ್ದಾರೆ.
ಮೇ 15 ರಂದು ರಾತ್ರಿ 8 ರ ಸುಮಾರಿಗೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಪ್ಪನಪೇಟೆಯಲ್ಲಿ ವೃದ್ಧೆ ಉಗುಮಬಾಯಿ ಅವರ ಬಳಿ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಪುರುಷೋತ್ತಮ್ ಅವರು ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು.
ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಅಪರಾಧ ವಿಭಾಗದ ಪಿಎಸ್ಐ ನಂಜುಂಡಯ್ಯ ಹಾಗೂ ಸಿಬ್ಬಂದಿಗಳಾದ ಪಾಂಡುರಂಗ, ಕರಾರ್ ಹುಸೇನ್, ವಸಂತಕುಮಾರ್, ಸುನಿಲ್ ಭಾಸಗಿ , ಹುಸೇನ್ ಸಾಬ್ ಕಂಕುರಿ ಹಾಗೂ ಯೋಗಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…