ಮೂವರು ಸರಗಳ್ಳರನ್ನು ವಶಕ್ಕೆ‌ ಪಡೆದ ಪೊಲೀಸರು: ಬಂಧಿತರಿಂದ‌ ಕದ್ದ ವಸ್ತುಗಳ ಜಪ್ತಿ

ಇತ್ತೀಚೆಗೆ ನಗರದಲ್ಲಿ ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿರುವವ ಕಳ್ಳರನ್ನು ಬಂಧಿಸಿದ ಪೊಲೀಸರು.

ನಗರ ಹಾಗೂ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಸರಣಿ ಸರಗಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ‌ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೆದ್ದಲಪಾಳ್ಯ ಗ್ರಾಮದ‌ ನಿವಾಸಿ ಆರ್. ಸುಬ್ರಮಣ್ಯ( 24), ಗೆದ್ದಲಪಾಳ್ಯ ದಿನ್ನೆಯ‌ ನಿವಾಸಿ ಎನ್. ಪ್ರವೀಣ್ ಕುಮಾರ್ (19) ಹಾಗೂ ಪಾಲನಜೋಗಹಳ್ಳಿಯಲ್ಲಿ ವಾಸವಿರುವ ಜೊಮೆಟೊ ಡೆಲಿವರಿ ಬಾಯ್ ಎನ್. ಅಭಿಲಾಷ್(22) ಬಂಧಿತ ಆರೋಪಿಗಳು.

ಒಟ್ಟು 4( ನಗರ ಹಾಗೂ ಗ್ರಾಮಾಂತರ ಠಾಣೆಯ ತಲಾ ಎರಡು ಪ್ರಕರಣ) ಸರಗಳವು ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು, ಬಂಧಿತರಿಂದ ಸುಮಾರು 130 ಗ್ರಾಂ ತೂಕದ ನಾಲ್ಕು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ KA- 51-4404 ನೋಂದಣಿ ಸಂಖ್ಯೆಯ‌ ಬೈಕ್ ವಶಪಡಿಸಿಕೊಂಡಿದ್ದಾರೆ.

ಮೇ 15 ರಂದು ರಾತ್ರಿ 8 ರ ಸುಮಾರಿಗೆ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಚ್ಚಪ್ಪನಪೇಟೆಯಲ್ಲಿ ವೃದ್ಧೆ ಉಗುಮಬಾಯಿ ಅವರ ಬಳಿ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ‌ ಪುರುಷೋತ್ತಮ್ ಅವರು ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು.

ನಗರ ಪೊಲೀಸ್‌ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ, ಅಪರಾಧ ವಿಭಾಗದ ಪಿಎಸ್‌ಐ ನಂಜುಂಡಯ್ಯ ಹಾಗೂ ಸಿಬ್ಬಂದಿಗಳಾದ ಪಾಂಡುರಂಗ, ಕರಾರ್ ಹುಸೇನ್, ವಸಂತಕುಮಾರ್, ಸುನಿಲ್ ಭಾಸಗಿ , ಹುಸೇನ್ ಸಾಬ್ ಕಂಕುರಿ ಹಾಗೂ ಯೋಗಶ್ರೀ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

11 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

16 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago