ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆ ಕುರಿತ ಸಿಎಂ ಸಭೆ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.

• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.

• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

8 minutes ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

13 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

15 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

15 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

17 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago