ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:
• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.
• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.
• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.
• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.
• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.
• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.
• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.
• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…