ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆ ಕುರಿತ ಸಿಎಂ ಸಭೆ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.

• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.

• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

6 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

7 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago