ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆ ಕುರಿತ ಸಿಎಂ ಸಭೆ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.

• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.

• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

11 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

12 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago