ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆ ಕುರಿತ ಸಿಎಂ ಸಭೆ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.

• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.

• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago