ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆ ಕುರಿತ ಸಿಎಂ ಸಭೆ

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:

• ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು.

• ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್‌ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲಾ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕಾಗಿದೆ.

• ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆಜೋಳ ಬೆಳೆಗಾರರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.

• ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು.

• ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ.

• ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ ರೂ.2,639 ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.2,400 ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ.

• ರಾಜ್ಯದಲ್ಲಿ ಧಾನ್ಯ ಮಾತ್ರ ಆಧಾರಿತ ಮೂರು ಡಿಸ್ಟಿಲರಿಗಳಿಗೆ ಒಟ್ಟು 94,400 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 2,48,461 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆ ಇದೆ. 7 ಡ್ಯುಯಲ್ ಫೀಡ್‌ಸ್ಟಾಕ್ ಡಿಸ್ಟಿಲರಿಗಳಿಗೆ 1,90,751 ಕಿ.ಲೀ ಎಥೆನಾಲ್ ಹಂಚಿಕೆ ಮಾಡಲಾಗಿದ್ದು, 5,02,056 ಮೆ.ಟನ್ ಮೆಕ್ಕೆಜೋಳದ ಅವಶ್ಯಕತೆಯಿದೆ.

• ನಿಯಮಾನುಸಾರ ಡಿಸ್ಟಿಲರಿಗಳು ರೈತರಿಂದ ಮೆಕ್ಕೆಜೋಳ ಖರೀದಿಸಿ, ರೈತರ ಹಿತ ಕಾಯುವ ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಬೇಕು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

36 minutes ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

13 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

13 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

13 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

22 hours ago