ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ.
ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಟಿ.ವೆಂಕಟಪುರ ಗ್ರಾಮದ ಜನಮಡುಗಪ್ಪ ಅಲಿಯಾಸ್ ಲಂಬು ಬಿನ್ ಲೇಟ್ ನಾರಾಯಣಪ್ಪ (55) ರವರ ಜಮೀನಿನಲ್ಲಿ ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, ಸ್ಥಳದಲ್ಲಿ ದಾಳಿ ಮಾಡಿ 4 ಕೆಜಿ 70 ಗ್ರಾಂ ತೂಕದ ಸುಮಾರು 1,05,000 ರೂ ಬೆಲೆಬಾಳುವ ಗಾಂಜಾ ಗಿಡಗಳನ್ನು ಆರೋಪಿ ಸಹಿತ ವಶಕ್ಕೆಪಡೆದುಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್, ದಿಬ್ಬೂರಳ್ಳಿ ಪೊಲೀಸ್ ಠಾಣಾ ಆರಕ್ಷಕ ಉಪ ನಿರೀಕ್ಷಕಿ ಶ್ಯಾಮಲ, ಪೊಲೀಸ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ, ನರಸಿಂಹಯ್ಯ, ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್.ಎ.ಆರ್, ಶ್ರೀನಿವಾಸಮೂರ್ತಿ, ಶಶಿಕುಮಾರ್ ಹಾಗೂ ತನಿಖಾ ಸಹಾಯಕ ಸಿಬ್ಬಂದಿ ಸಂತೋಷಕುಮಾರ್, ವಸಂತಕುಮಾರ್ ದಾಳಿ ವೇಳೆ ಇದ್ದರು.
ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…
ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…
ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…
ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…