ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ.
ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಟಿ.ವೆಂಕಟಪುರ ಗ್ರಾಮದ ಜನಮಡುಗಪ್ಪ ಅಲಿಯಾಸ್ ಲಂಬು ಬಿನ್ ಲೇಟ್ ನಾರಾಯಣಪ್ಪ (55) ರವರ ಜಮೀನಿನಲ್ಲಿ ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, ಸ್ಥಳದಲ್ಲಿ ದಾಳಿ ಮಾಡಿ 4 ಕೆಜಿ 70 ಗ್ರಾಂ ತೂಕದ ಸುಮಾರು 1,05,000 ರೂ ಬೆಲೆಬಾಳುವ ಗಾಂಜಾ ಗಿಡಗಳನ್ನು ಆರೋಪಿ ಸಹಿತ ವಶಕ್ಕೆಪಡೆದುಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್, ದಿಬ್ಬೂರಳ್ಳಿ ಪೊಲೀಸ್ ಠಾಣಾ ಆರಕ್ಷಕ ಉಪ ನಿರೀಕ್ಷಕಿ ಶ್ಯಾಮಲ, ಪೊಲೀಸ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ, ನರಸಿಂಹಯ್ಯ, ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್.ಎ.ಆರ್, ಶ್ರೀನಿವಾಸಮೂರ್ತಿ, ಶಶಿಕುಮಾರ್ ಹಾಗೂ ತನಿಖಾ ಸಹಾಯಕ ಸಿಬ್ಬಂದಿ ಸಂತೋಷಕುಮಾರ್, ವಸಂತಕುಮಾರ್ ದಾಳಿ ವೇಳೆ ಇದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…