ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ.
ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಟಿ.ವೆಂಕಟಪುರ ಗ್ರಾಮದ ಜನಮಡುಗಪ್ಪ ಅಲಿಯಾಸ್ ಲಂಬು ಬಿನ್ ಲೇಟ್ ನಾರಾಯಣಪ್ಪ (55) ರವರ ಜಮೀನಿನಲ್ಲಿ ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, ಸ್ಥಳದಲ್ಲಿ ದಾಳಿ ಮಾಡಿ 4 ಕೆಜಿ 70 ಗ್ರಾಂ ತೂಕದ ಸುಮಾರು 1,05,000 ರೂ ಬೆಲೆಬಾಳುವ ಗಾಂಜಾ ಗಿಡಗಳನ್ನು ಆರೋಪಿ ಸಹಿತ ವಶಕ್ಕೆಪಡೆದುಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್, ದಿಬ್ಬೂರಳ್ಳಿ ಪೊಲೀಸ್ ಠಾಣಾ ಆರಕ್ಷಕ ಉಪ ನಿರೀಕ್ಷಕಿ ಶ್ಯಾಮಲ, ಪೊಲೀಸ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ, ನರಸಿಂಹಯ್ಯ, ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್.ಎ.ಆರ್, ಶ್ರೀನಿವಾಸಮೂರ್ತಿ, ಶಶಿಕುಮಾರ್ ಹಾಗೂ ತನಿಖಾ ಸಹಾಯಕ ಸಿಬ್ಬಂದಿ ಸಂತೋಷಕುಮಾರ್, ವಸಂತಕುಮಾರ್ ದಾಳಿ ವೇಳೆ ಇದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…