ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ ಆರೋಪಿ ಬಂಧನ

ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ.

ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಟಿ.ವೆಂಕಟಪುರ ಗ್ರಾಮದ ಜನಮಡುಗಪ್ಪ ಅಲಿಯಾಸ್ ಲಂಬು ಬಿನ್ ಲೇಟ್ ನಾರಾಯಣಪ್ಪ (55) ರವರ ಜಮೀನಿನಲ್ಲಿ ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, ಸ್ಥಳದಲ್ಲಿ ದಾಳಿ ಮಾಡಿ 4 ಕೆಜಿ 70 ಗ್ರಾಂ ತೂಕದ ಸುಮಾರು 1,05,000 ರೂ ಬೆಲೆಬಾಳುವ ಗಾಂಜಾ ಗಿಡಗಳನ್ನು ಆರೋಪಿ ಸಹಿತ ವಶಕ್ಕೆ‌ಪಡೆದುಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಎಂ ಶ್ರೀನಿವಾಸ್, ದಿಬ್ಬೂರಳ್ಳಿ ಪೊಲೀಸ್ ಠಾಣಾ ಆರಕ್ಷಕ ಉಪ ನಿರೀಕ್ಷಕಿ ಶ್ಯಾಮಲ, ಪೊಲೀಸ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ, ನರಸಿಂಹಯ್ಯ, ಕೃಷ್ಣಪ್ಪ, ಚಂದ್ರಶೇಖರ್, ಪ್ರತಾಪ್.ಎ.ಆರ್, ಶ್ರೀನಿವಾಸಮೂರ್ತಿ, ಶಶಿಕುಮಾ‌ರ್ ಹಾಗೂ ತನಿಖಾ ಸಹಾಯಕ ಸಿಬ್ಬಂದಿ ಸಂತೋಷಕುಮಾರ್, ವಸಂತಕುಮಾ‌ರ್ ದಾಳಿ ವೇಳೆ ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

6 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

15 hours ago