ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ ಹೊಸ ಬಸ್ ಮಾರ್ಗಗಳನ್ನು ಆರಂಭಿಸಲು ಮುಂದಾಗಿದೆ.
ದೇವನಹಳ್ಳಿ, ವಿಜಯಪುರ, ಘಾಟಿ ಸುಬ್ರಮಣ್ಯ ದೇವಸ್ಥಾನ ಹಾಗೂ ನಂದಿ ಕ್ರಾಸ್ ಭಾಗಗಳಿಗೆ ಮೂರು ಹೊಸ ಮಾರ್ಗಗಳಲ್ಲಿ ಬಸ್ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ ಹೊಸ ಮಾರ್ಗಗಳನ್ನು ಪರಿಚಯಿಸಲಾಗಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಈ ಸೇವೆ ನೆರವಾಗಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸದಾಗಿ ಆರಂಭವಾಗುತ್ತಿರುವ ಇಎಕ್ಸ್-298ಎಂಪಿ ಎಕ್ಸ್ಪ್ರೆಸ್ ಸೇವೆ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಜಯಪುರದವರೆಗೆ ಸಂಚರಿಸಲಿದೆ. ಈ ಮಾರ್ಗದಲ್ಲಿ ಹೆಬ್ಬಾಳ, ಯಲಹಂಕ ಹಾಗೂ ದೇವನಹಳ್ಳಿ ಮೂಲಕ ಸೀಮಿತ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 8 ಬಸ್ಗಳು ಕಾರ್ಯಾಚರಿಸಲಿದ್ದು, ಪ್ರತಿದಿನ 47 ಸುತ್ತುವಳಿ ಸೇವೆ ನೀಡಲಾಗುತ್ತದೆ.
ಇದೇ ವೇಳೆ 285ಎಂವಿ ಮಾರ್ಗದ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಶ್ರೀ ಘಾಟಿ ಸುಬ್ರಹ್ಮಣ್ಯ ದೇಬಸ್ಥಾನದವರೆಗೆ ಸಂಚರಿಸಲಿವೆ. ಹೆಬ್ಬಾಳ, ಯಲಹಂಕ, ಎನ್ಇಎಸ್ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ಓಡುವ ಈ ಸೇವೆ ದೇವಸ್ಥಾನಕ್ಕೆ ತೆರಳುವ ಭಕ್ತಾದಿಗಳಿಗೆ ಹೆಚ್ಚು ಅನುಕೂಲಕರವಾಗಲಿದೆ. ಈ ಮಾರ್ಗದಲ್ಲಿ 5 ಬಸ್ಗಳು ಮತ್ತು 18 ಸುತ್ತುವಳಿ ಸೇವೆ ಲಭ್ಯವಾಗಲಿದೆ.
ಅದೇ ರೀತಿ 298ಎಂಡಬ್ಲ್ಯೂ ಮಾರ್ಗದ ಬಸ್ಗಳು ದೇವನಹಳ್ಳಿಯಿಂದ ನಂದಿ ಕ್ರಾಸ್ ವರೆಗೆ ಸಂಚರಿಸಲಿವೆ. ಆವತಿ ಹಾಗೂ ವೆಂಕಟಗಿರಿ ಕೋಟೆ ಮಾರ್ಗವಾಗಿ ಓಡುವ ಈ ಸೇವೆ ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳಿಗೆ ನೆರವಾಗಲಿದೆ. ಈ ಮಾರ್ಗದಲ್ಲಿ 3 ಬಸ್ಗಳು ಕಾರ್ಯಾಚರಿಸಲಿದ್ದು, 60 ಸುತ್ತುವಳಿ ಸೇವೆ ನಿಗದಿಪಡಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…