ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ ಹೊಸ ಬಸ್ ಮಾರ್ಗಗಳನ್ನು ಆರಂಭಿಸಲು ಮುಂದಾಗಿದೆ.

ದೇವನಹಳ್ಳಿ, ವಿಜಯಪುರ, ಘಾಟಿ ಸುಬ್ರಮಣ್ಯ ದೇವಸ್ಥಾನ ಹಾಗೂ ನಂದಿ ಕ್ರಾಸ್ ಭಾಗಗಳಿಗೆ ಮೂರು ಹೊಸ ಮಾರ್ಗಗಳಲ್ಲಿ ಬಸ್ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.

ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ ಹೊಸ ಮಾರ್ಗಗಳನ್ನು ಪರಿಚಯಿಸಲಾಗಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಈ ಸೇವೆ ನೆರವಾಗಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸದಾಗಿ ಆರಂಭವಾಗುತ್ತಿರುವ ಇಎಕ್ಸ್-298ಎಂಪಿ ಎಕ್ಸ್‌ಪ್ರೆಸ್ ಸೇವೆ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಜಯಪುರದವರೆಗೆ ಸಂಚರಿಸಲಿದೆ. ಈ ಮಾರ್ಗದಲ್ಲಿ ಹೆಬ್ಬಾಳ, ಯಲಹಂಕ ಹಾಗೂ ದೇವನಹಳ್ಳಿ ಮೂಲಕ ಸೀಮಿತ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 8 ಬಸ್‌ಗಳು ಕಾರ್ಯಾಚರಿಸಲಿದ್ದು, ಪ್ರತಿದಿನ 47 ಸುತ್ತುವಳಿ ಸೇವೆ ನೀಡಲಾಗುತ್ತದೆ.

ಇದೇ ವೇಳೆ 285ಎಂವಿ ಮಾರ್ಗದ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಶ್ರೀ ಘಾಟಿ ಸುಬ್ರಹ್ಮಣ್ಯ ದೇಬಸ್ಥಾನದವರೆಗೆ ಸಂಚರಿಸಲಿವೆ. ಹೆಬ್ಬಾಳ, ಯಲಹಂಕ, ಎನ್‌ಇಎಸ್ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ಓಡುವ ಈ ಸೇವೆ ದೇವಸ್ಥಾನಕ್ಕೆ ತೆರಳುವ ಭಕ್ತಾದಿಗಳಿಗೆ ಹೆಚ್ಚು ಅನುಕೂಲಕರವಾಗಲಿದೆ. ಈ ಮಾರ್ಗದಲ್ಲಿ 5 ಬಸ್‌ಗಳು ಮತ್ತು 18 ಸುತ್ತುವಳಿ ಸೇವೆ ಲಭ್ಯವಾಗಲಿದೆ.

ಅದೇ ರೀತಿ 298ಎಂಡಬ್ಲ್ಯೂ ಮಾರ್ಗದ ಬಸ್‌ಗಳು ದೇವನಹಳ್ಳಿಯಿಂದ ನಂದಿ ಕ್ರಾಸ್ ವರೆಗೆ ಸಂಚರಿಸಲಿವೆ. ಆವತಿ ಹಾಗೂ ವೆಂಕಟಗಿರಿ ಕೋಟೆ ಮಾರ್ಗವಾಗಿ ಓಡುವ ಈ ಸೇವೆ ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳಿಗೆ ನೆರವಾಗಲಿದೆ. ಈ ಮಾರ್ಗದಲ್ಲಿ 3 ಬಸ್‌ಗಳು ಕಾರ್ಯಾಚರಿಸಲಿದ್ದು, 60 ಸುತ್ತುವಳಿ ಸೇವೆ ನಿಗದಿಪಡಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

Ramesh Babu

Journalist

Recent Posts

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

11 hours ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

17 hours ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

24 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

1 day ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

2 days ago