ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ ಹೊಸ ಬಸ್ ಮಾರ್ಗಗಳನ್ನು ಆರಂಭಿಸಲು ಮುಂದಾಗಿದೆ.
ದೇವನಹಳ್ಳಿ, ವಿಜಯಪುರ, ಘಾಟಿ ಸುಬ್ರಮಣ್ಯ ದೇವಸ್ಥಾನ ಹಾಗೂ ನಂದಿ ಕ್ರಾಸ್ ಭಾಗಗಳಿಗೆ ಮೂರು ಹೊಸ ಮಾರ್ಗಗಳಲ್ಲಿ ಬಸ್ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ ಹೊಸ ಮಾರ್ಗಗಳನ್ನು ಪರಿಚಯಿಸಲಾಗಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಈ ಸೇವೆ ನೆರವಾಗಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸದಾಗಿ ಆರಂಭವಾಗುತ್ತಿರುವ ಇಎಕ್ಸ್-298ಎಂಪಿ ಎಕ್ಸ್ಪ್ರೆಸ್ ಸೇವೆ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಜಯಪುರದವರೆಗೆ ಸಂಚರಿಸಲಿದೆ. ಈ ಮಾರ್ಗದಲ್ಲಿ ಹೆಬ್ಬಾಳ, ಯಲಹಂಕ ಹಾಗೂ ದೇವನಹಳ್ಳಿ ಮೂಲಕ ಸೀಮಿತ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 8 ಬಸ್ಗಳು ಕಾರ್ಯಾಚರಿಸಲಿದ್ದು, ಪ್ರತಿದಿನ 47 ಸುತ್ತುವಳಿ ಸೇವೆ ನೀಡಲಾಗುತ್ತದೆ.
ಇದೇ ವೇಳೆ 285ಎಂವಿ ಮಾರ್ಗದ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಶ್ರೀ ಘಾಟಿ ಸುಬ್ರಹ್ಮಣ್ಯ ದೇಬಸ್ಥಾನದವರೆಗೆ ಸಂಚರಿಸಲಿವೆ. ಹೆಬ್ಬಾಳ, ಯಲಹಂಕ, ಎನ್ಇಎಸ್ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ಓಡುವ ಈ ಸೇವೆ ದೇವಸ್ಥಾನಕ್ಕೆ ತೆರಳುವ ಭಕ್ತಾದಿಗಳಿಗೆ ಹೆಚ್ಚು ಅನುಕೂಲಕರವಾಗಲಿದೆ. ಈ ಮಾರ್ಗದಲ್ಲಿ 5 ಬಸ್ಗಳು ಮತ್ತು 18 ಸುತ್ತುವಳಿ ಸೇವೆ ಲಭ್ಯವಾಗಲಿದೆ.
ಅದೇ ರೀತಿ 298ಎಂಡಬ್ಲ್ಯೂ ಮಾರ್ಗದ ಬಸ್ಗಳು ದೇವನಹಳ್ಳಿಯಿಂದ ನಂದಿ ಕ್ರಾಸ್ ವರೆಗೆ ಸಂಚರಿಸಲಿವೆ. ಆವತಿ ಹಾಗೂ ವೆಂಕಟಗಿರಿ ಕೋಟೆ ಮಾರ್ಗವಾಗಿ ಓಡುವ ಈ ಸೇವೆ ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳಿಗೆ ನೆರವಾಗಲಿದೆ. ಈ ಮಾರ್ಗದಲ್ಲಿ 3 ಬಸ್ಗಳು ಕಾರ್ಯಾಚರಿಸಲಿದ್ದು, 60 ಸುತ್ತುವಳಿ ಸೇವೆ ನಿಗದಿಪಡಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…