ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ ಹೊಸ ಬಸ್ ಮಾರ್ಗಗಳನ್ನು ಆರಂಭಿಸಲು ಮುಂದಾಗಿದೆ.
ದೇವನಹಳ್ಳಿ, ವಿಜಯಪುರ, ಘಾಟಿ ಸುಬ್ರಮಣ್ಯ ದೇವಸ್ಥಾನ ಹಾಗೂ ನಂದಿ ಕ್ರಾಸ್ ಭಾಗಗಳಿಗೆ ಮೂರು ಹೊಸ ಮಾರ್ಗಗಳಲ್ಲಿ ಬಸ್ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ ಹೊಸ ಮಾರ್ಗಗಳನ್ನು ಪರಿಚಯಿಸಲಾಗಿದ್ದು, ಉದ್ಯೋಗಿಗಳು, ವಿದ್ಯಾರ್ಥಿಗಳು, ಭಕ್ತಾದಿಗಳು ಹಾಗೂ ಪ್ರವಾಸಿಗರಿಗೆ ಈ ಸೇವೆ ನೆರವಾಗಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸದಾಗಿ ಆರಂಭವಾಗುತ್ತಿರುವ ಇಎಕ್ಸ್-298ಎಂಪಿ ಎಕ್ಸ್ಪ್ರೆಸ್ ಸೇವೆ ಕೆಂಪೇಗೌಡ ಬಸ್ ನಿಲ್ದಾಣದಿಂದ ವಿಜಯಪುರದವರೆಗೆ ಸಂಚರಿಸಲಿದೆ. ಈ ಮಾರ್ಗದಲ್ಲಿ ಹೆಬ್ಬಾಳ, ಯಲಹಂಕ ಹಾಗೂ ದೇವನಹಳ್ಳಿ ಮೂಲಕ ಸೀಮಿತ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಟ್ಟು 8 ಬಸ್ಗಳು ಕಾರ್ಯಾಚರಿಸಲಿದ್ದು, ಪ್ರತಿದಿನ 47 ಸುತ್ತುವಳಿ ಸೇವೆ ನೀಡಲಾಗುತ್ತದೆ.
ಇದೇ ವೇಳೆ 285ಎಂವಿ ಮಾರ್ಗದ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಶ್ರೀ ಘಾಟಿ ಸುಬ್ರಹ್ಮಣ್ಯ ದೇಬಸ್ಥಾನದವರೆಗೆ ಸಂಚರಿಸಲಿವೆ. ಹೆಬ್ಬಾಳ, ಯಲಹಂಕ, ಎನ್ಇಎಸ್ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ಓಡುವ ಈ ಸೇವೆ ದೇವಸ್ಥಾನಕ್ಕೆ ತೆರಳುವ ಭಕ್ತಾದಿಗಳಿಗೆ ಹೆಚ್ಚು ಅನುಕೂಲಕರವಾಗಲಿದೆ. ಈ ಮಾರ್ಗದಲ್ಲಿ 5 ಬಸ್ಗಳು ಮತ್ತು 18 ಸುತ್ತುವಳಿ ಸೇವೆ ಲಭ್ಯವಾಗಲಿದೆ.
ಅದೇ ರೀತಿ 298ಎಂಡಬ್ಲ್ಯೂ ಮಾರ್ಗದ ಬಸ್ಗಳು ದೇವನಹಳ್ಳಿಯಿಂದ ನಂದಿ ಕ್ರಾಸ್ ವರೆಗೆ ಸಂಚರಿಸಲಿವೆ. ಆವತಿ ಹಾಗೂ ವೆಂಕಟಗಿರಿ ಕೋಟೆ ಮಾರ್ಗವಾಗಿ ಓಡುವ ಈ ಸೇವೆ ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳಿಗೆ ನೆರವಾಗಲಿದೆ. ಈ ಮಾರ್ಗದಲ್ಲಿ 3 ಬಸ್ಗಳು ಕಾರ್ಯಾಚರಿಸಲಿದ್ದು, 60 ಸುತ್ತುವಳಿ ಸೇವೆ ನಿಗದಿಪಡಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…