ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ 2.50 ಲಕ್ಷ ಇರಬೇಕು ಹಾಗೂ ಪ್ರವರ್ಗ-2ಎ, 2ಬಿ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಗೆ ರೂ 1.00 ಲಕ್ಷ ಆದಾಯ ಮಿತಿ ಇರಬೇಕು.

ವಿದ್ಯಾರ್ಥಿಗಳು https://shp.karnatak.gov.in ಅನ್ನು ಸಂಪರ್ಕಿಸಿ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು 2023 ರ ಆಗಸ್ಟ್ 16 ಕೊನೆಯ ದಿನವಾಗಿದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು
ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-29787440 ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

4 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

4 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

16 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

18 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

18 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

19 hours ago