ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ. ಇತ್ತೀಚಿನ ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಜನರ ಅಹವಾಲಿಗೆ ಕಿವಿಯಾಗಬೇಕಿರುವುದು ಪ್ರತಿ ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ನಂಬಿರುವ ನಮಗೆ ನಿಮ್ಮ ಅಹವಾಲುಗಳೇ ಆದ್ಯತೆಯಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸತ್ಯ ಸಂಗತಿ ಏನೆಂದರೆ;
ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ, ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ದರಗಳನ್ನು ಕೇಂದ್ರ ಸರ್ಕಾರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಮೂಲಕ ರಚಿಸಲಾದ ಸ್ವತಂತ್ರ ದರ ನಿಗದಿ ಕಮಿಟಿ (FFC) ನಿರ್ಧರಿಸುತ್ತದೆ ಎಂದರು.

ಆಕ್ಟ್‌ನ ಸೆಕ್ಷನ್ 36ರ ಪ್ರಕಾರ, ದರ ನಿಗದಿ ಕಮಿಟಿಯು ನಿಗದಿತ ಅವಧಿಯೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸಬೇಕು, ಮತ್ತು ಸೆಕ್ಷನ್ 37ರ ಅಡಿಯಲ್ಲಿ ಈ ಶಿಫಾರಸುಗಳು ಮೆಟ್ರೋ ಆಡಳಿತವು ಒಪ್ಪಲೇಬೇಕಿದೆ ಮತ್ತು ಜಾರಿ ಮಾಡಬೇಕಿದೆ. ರಾಜ್ಯ ಸರ್ಕಾರಕ್ಕೆ ಅಥವಾ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಈ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಈ ದರ ನಿಗದಿ ಕಮಿಟಿಯನ್ನು:
● ಕೇಂದ್ರ ಸರ್ಕಾರವೇ ರಚಿಸುತ್ತದೆ.
● ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯವರು ಕಮಿಟಿಯ ನೇತೃತ್ವ ವಹಿಸಿರುತ್ತಾರೆ.
● ಕೇಂದ್ರದ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ.
● ಮತ್ತು ಸಂಸತ್ತಿನಲ್ಲಿ ತಾವೇ ಈ ಶಿಫಾರಸುಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮಾಡಿ ಈಗ ನಮ್ಮ ಸರ್ಕಾರದ ಮೇಲೆ ಬೆಲೆಯೇರಿಕೆ ನಿರ್ಧಾರದ ಆರೋಪ ಹೊರಿಸುವುದು ಅಪ್ರಾಮಾಣಿಕ ನಡೆ ಮಾತ್ರವಲ್ಲ, ಜನರನ್ನು ಉದ್ದೇಶಪೂರ್ವಕವಾಗಿ ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ.

ನಾನು ಈ ಕೆಳಕಂಡ ವಿಷಯವನ್ನು ಔಪಚಾರಿಕವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಿದ್ದು, ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ನವರ ಒತ್ತಾಯಗಳು:

● ದರ ನಿಗದಿ ಕಮಿಟಿಯು ಶಿಫಾರಸು ಮಾಡಿರುವ ದರವನ್ನು ಮರುಪರಿಶೀಲಿಸಬೇಕು.
● ದೈನಂದಿನ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಬಡಜನರಿಗೆ ಅನುಕೂಲವಾಗುವಂತೆ ಸಮಾನವಾಗಿ ದರ ನಿಗದಿ ಮಾಡುವ ವ್ಯವಸ್ಥೆಯನ್ನು ಅನುಸರಿಸಬೇಕು.
● ಸಾಮಾಜಿಕ ನ್ಯಾಯದೊಂದಿಗೆ ಸುಸ್ಥಿರ ಆರ್ಥಿಕತೆಯನ್ನು ಸರಿದೂಗಿಸುವ ನೀತಿಗಳ ಬಗ್ಗೆ ಗಮನ ಹರಿಸಬೇಕು.
ನಗರಗಳ ಸಂಪರ್ಕ ಹಾಗೂ ಸಾರಿಗೆ, ಸಾರ್ವಜನಿಕ ಸೇವೆಗಳು ಮತ್ತು ಜನರ ಹಿತವನ್ನು ರಕ್ಷಿಸುವಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿ ರಾಜ್ಯವಾಗಿದೆ. ನಾವು ಬೆಂಗಳೂರು ನಗರ ನಿವಾಸಿಗಳ ಹಿತರಕ್ಷಣೆಗಾಗಿ ಸಂವಿಧಾನಾತ್ಮಕವಾಗಿ, ರಚನಾತ್ಮಕವಾಗಿ ಮತ್ತು ದೃಢವಾಗಿ ನಿಲ್ಲಲಿದ್ದೇವೆ ಎಂದರು.

ವಿರೋಧ ಪಕ್ಷಗಳು ಹರಡುತ್ತಿರುವ ತಪ್ಪು ಮಾಹಿತಿಯನ್ನು ಬದಿಗೊತ್ತಿ ರಾಜ್ಯದ ಜನತೆಯ ಹಿತಕ್ಕಾಗಿ ನೀವೆಲ್ಲರೂ ನಮ್ಮ ಜೊತೆ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ. ದೆಹಲಿಯಲ್ಲಿ ಕರ್ನಾಟಕದ ಹಿತ ಕಾಪಾಡಲು ವಿಫಲರಾಗಿರುವ ಬಿಜೆಪಿ ನಾಯಕರೇ ಇಂದು ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಟೀಕಿಸುವ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

● ಕರ್ನಾಟಕದ ಬಿಜೆಪಿ ಸಂಸದರು ಈ ವಿಷಯವನ್ನು ಸಂಸತ್ತಿನಲ್ಲಿ ಏಕೆ ಪ್ರಶ್ನಿಸಲಿಲ್ಲ?
● ಕರ್ನಾಟಕದ ಬಿಜೆಪಿ ಸಚಿವರು ಕೇಂದ್ರ ಮಟ್ಟದಲ್ಲಿ ಉನ್ನತ ದರದ ಸ್ಲ್ಯಾಬ್‌ಗಳನ್ನು ಏಕೆ ವಿರೋಧಿಸಲಿಲ್ಲ?
● ಬೆಂಗಳೂರಿಗರ ಬೆಂಬಲಕ್ಕೆ ನಿಲ್ಲಬೇಕಿದ್ದ ಕರ್ನಾಟಕದ ಬಿಜೆಪಿ ನಾಯಕರು ದೆಹಲಿ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿರುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ ಮ

ಅಸಮರ್ಪಕ ತೆರಿಗೆ ಹಂಚಿಕೆ, ನ್ಯಾಯಯುತ ಅನುದಾನದ ನಿರಾಕರಣೆ, ಮೂಲಭೂತ ಸೌಲಭ್ಯಗಳಿಗೆ ಬೆಂಬಲ ನೀಡುವಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿ ಮತ್ತು ಈಗ ಸಾಮಾನ್ಯ ಜನರ ಮೇಲೆ ಹೊರೆ ಹಾಕುವ ಮೆಟ್ರೋ ದರಗಳು, ಇವೆಲ್ಲವೂ ಕನ್ನಡಿಗರನ್ನು ಶೋಷಣೆಗೊಳಿಪಡಿಸಲು ಕೇಂದ್ರ ಸರ್ಕಾರದ ಅಸ್ತ್ರಗಳಾಗಿವೆ ಎಂದರು.

ರಾಜ್ಯ ಬಿಜೆಪಿ ನಾಯಕರು ತಮ್ಮ ಹೈಕಮಾಂಡ್‌ನ ಓಲೈಕೆಗಾಗಿ ಸುಳ್ಳು ಮಾಹಿತಿ ನೀಡುವುದನ್ನು ಬಿಟ್ಟು, ಜನರ ಹಿತಕ್ಕಾಗಿ ಈಗಲಾದರೂ ತಮ್ಮದೇ ಪ್ರಧಾನಿಗಳ ಬಳಿ ಧ್ವನಿಯೆತ್ತಲಿ ಎಂದು ಹೇಳಿದರು.

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

48 minutes ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 days ago