ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಟ್ರೋ ಕೇವಲ ಒಂದು ಸಾರಿಗೆ ವ್ಯವಸ್ಥೆಯಲ್ಲ, ಅದು ನಮ್ಮ ನಗರದ ಲಕ್ಷಾಂತರ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಕುಟುಂಬಗಳ ಕನಸುಗಳನ್ನು ಹೊತ್ತೊಯ್ಯುವ, ಪ್ರಗತಿಯತ್ತ ಮುನ್ನಡೆಸುವ ಮತ್ತು ಈ ಎಲ್ಲರ ದೈನಂದಿನ ಜೀವನಾಡಿಯ ಸಂಕೇತವಾಗಿದೆ. ಇತ್ತೀಚಿನ ಮೆಟ್ರೋ ದರ ಪರಿಷ್ಕರಣೆಯ ನಂತರ ಪ್ರಯಾಣಿಕರಿಂದ ವ್ಯಕ್ತವಾದ ಆತಂಕ ಮತ್ತು ಬೇಸರವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಜನರ ಅಹವಾಲಿಗೆ ಕಿವಿಯಾಗಬೇಕಿರುವುದು ಪ್ರತಿ ಜವಾಬ್ದಾರಿಯುತ ಸರ್ಕಾರದ ಕರ್ತವ್ಯ ಎಂದು ನಂಬಿರುವ ನಮಗೆ ನಿಮ್ಮ ಅಹವಾಲುಗಳೇ ಆದ್ಯತೆಯಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸತ್ಯ ಸಂಗತಿ ಏನೆಂದರೆ;
ಮೆಟ್ರೋ ರೈಲ್ವೇಸ್ (ಆಪರೇಷನ್ & ಮೇಂಟೆನೆನ್ಸ್) ಆಕ್ಟ್, 2002ರ ಅಡಿಯಲ್ಲಿ, ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ದರಗಳನ್ನು ಕೇಂದ್ರ ಸರ್ಕಾರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಮೂಲಕ ರಚಿಸಲಾದ ಸ್ವತಂತ್ರ ದರ ನಿಗದಿ ಕಮಿಟಿ (FFC) ನಿರ್ಧರಿಸುತ್ತದೆ ಎಂದರು.

ಆಕ್ಟ್‌ನ ಸೆಕ್ಷನ್ 36ರ ಪ್ರಕಾರ, ದರ ನಿಗದಿ ಕಮಿಟಿಯು ನಿಗದಿತ ಅವಧಿಯೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸಬೇಕು, ಮತ್ತು ಸೆಕ್ಷನ್ 37ರ ಅಡಿಯಲ್ಲಿ ಈ ಶಿಫಾರಸುಗಳು ಮೆಟ್ರೋ ಆಡಳಿತವು ಒಪ್ಪಲೇಬೇಕಿದೆ ಮತ್ತು ಜಾರಿ ಮಾಡಬೇಕಿದೆ. ರಾಜ್ಯ ಸರ್ಕಾರಕ್ಕೆ ಅಥವಾ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಈ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಈ ದರ ನಿಗದಿ ಕಮಿಟಿಯನ್ನು:
● ಕೇಂದ್ರ ಸರ್ಕಾರವೇ ರಚಿಸುತ್ತದೆ.
● ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಯವರು ಕಮಿಟಿಯ ನೇತೃತ್ವ ವಹಿಸಿರುತ್ತಾರೆ.
● ಕೇಂದ್ರದ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ.
● ಮತ್ತು ಸಂಸತ್ತಿನಲ್ಲಿ ತಾವೇ ಈ ಶಿಫಾರಸುಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮಾಡಿ ಈಗ ನಮ್ಮ ಸರ್ಕಾರದ ಮೇಲೆ ಬೆಲೆಯೇರಿಕೆ ನಿರ್ಧಾರದ ಆರೋಪ ಹೊರಿಸುವುದು ಅಪ್ರಾಮಾಣಿಕ ನಡೆ ಮಾತ್ರವಲ್ಲ, ಜನರನ್ನು ಉದ್ದೇಶಪೂರ್ವಕವಾಗಿ ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ.

ನಾನು ಈ ಕೆಳಕಂಡ ವಿಷಯವನ್ನು ಔಪಚಾರಿಕವಾಗಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಿದ್ದು, ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ನವರ ಒತ್ತಾಯಗಳು:

● ದರ ನಿಗದಿ ಕಮಿಟಿಯು ಶಿಫಾರಸು ಮಾಡಿರುವ ದರವನ್ನು ಮರುಪರಿಶೀಲಿಸಬೇಕು.
● ದೈನಂದಿನ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಬಡಜನರಿಗೆ ಅನುಕೂಲವಾಗುವಂತೆ ಸಮಾನವಾಗಿ ದರ ನಿಗದಿ ಮಾಡುವ ವ್ಯವಸ್ಥೆಯನ್ನು ಅನುಸರಿಸಬೇಕು.
● ಸಾಮಾಜಿಕ ನ್ಯಾಯದೊಂದಿಗೆ ಸುಸ್ಥಿರ ಆರ್ಥಿಕತೆಯನ್ನು ಸರಿದೂಗಿಸುವ ನೀತಿಗಳ ಬಗ್ಗೆ ಗಮನ ಹರಿಸಬೇಕು.
ನಗರಗಳ ಸಂಪರ್ಕ ಹಾಗೂ ಸಾರಿಗೆ, ಸಾರ್ವಜನಿಕ ಸೇವೆಗಳು ಮತ್ತು ಜನರ ಹಿತವನ್ನು ರಕ್ಷಿಸುವಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿ ರಾಜ್ಯವಾಗಿದೆ. ನಾವು ಬೆಂಗಳೂರು ನಗರ ನಿವಾಸಿಗಳ ಹಿತರಕ್ಷಣೆಗಾಗಿ ಸಂವಿಧಾನಾತ್ಮಕವಾಗಿ, ರಚನಾತ್ಮಕವಾಗಿ ಮತ್ತು ದೃಢವಾಗಿ ನಿಲ್ಲಲಿದ್ದೇವೆ ಎಂದರು.

ವಿರೋಧ ಪಕ್ಷಗಳು ಹರಡುತ್ತಿರುವ ತಪ್ಪು ಮಾಹಿತಿಯನ್ನು ಬದಿಗೊತ್ತಿ ರಾಜ್ಯದ ಜನತೆಯ ಹಿತಕ್ಕಾಗಿ ನೀವೆಲ್ಲರೂ ನಮ್ಮ ಜೊತೆ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ. ದೆಹಲಿಯಲ್ಲಿ ಕರ್ನಾಟಕದ ಹಿತ ಕಾಪಾಡಲು ವಿಫಲರಾಗಿರುವ ಬಿಜೆಪಿ ನಾಯಕರೇ ಇಂದು ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರವನ್ನು ಗುರಿಯಾಗಿಸಿ ಟೀಕಿಸುವ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

● ಕರ್ನಾಟಕದ ಬಿಜೆಪಿ ಸಂಸದರು ಈ ವಿಷಯವನ್ನು ಸಂಸತ್ತಿನಲ್ಲಿ ಏಕೆ ಪ್ರಶ್ನಿಸಲಿಲ್ಲ?
● ಕರ್ನಾಟಕದ ಬಿಜೆಪಿ ಸಚಿವರು ಕೇಂದ್ರ ಮಟ್ಟದಲ್ಲಿ ಉನ್ನತ ದರದ ಸ್ಲ್ಯಾಬ್‌ಗಳನ್ನು ಏಕೆ ವಿರೋಧಿಸಲಿಲ್ಲ?
● ಬೆಂಗಳೂರಿಗರ ಬೆಂಬಲಕ್ಕೆ ನಿಲ್ಲಬೇಕಿದ್ದ ಕರ್ನಾಟಕದ ಬಿಜೆಪಿ ನಾಯಕರು ದೆಹಲಿ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿರುವುದು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ ಮ

ಅಸಮರ್ಪಕ ತೆರಿಗೆ ಹಂಚಿಕೆ, ನ್ಯಾಯಯುತ ಅನುದಾನದ ನಿರಾಕರಣೆ, ಮೂಲಭೂತ ಸೌಲಭ್ಯಗಳಿಗೆ ಬೆಂಬಲ ನೀಡುವಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿ ಮತ್ತು ಈಗ ಸಾಮಾನ್ಯ ಜನರ ಮೇಲೆ ಹೊರೆ ಹಾಕುವ ಮೆಟ್ರೋ ದರಗಳು, ಇವೆಲ್ಲವೂ ಕನ್ನಡಿಗರನ್ನು ಶೋಷಣೆಗೊಳಿಪಡಿಸಲು ಕೇಂದ್ರ ಸರ್ಕಾರದ ಅಸ್ತ್ರಗಳಾಗಿವೆ ಎಂದರು.

ರಾಜ್ಯ ಬಿಜೆಪಿ ನಾಯಕರು ತಮ್ಮ ಹೈಕಮಾಂಡ್‌ನ ಓಲೈಕೆಗಾಗಿ ಸುಳ್ಳು ಮಾಹಿತಿ ನೀಡುವುದನ್ನು ಬಿಟ್ಟು, ಜನರ ಹಿತಕ್ಕಾಗಿ ಈಗಲಾದರೂ ತಮ್ಮದೇ ಪ್ರಧಾನಿಗಳ ಬಳಿ ಧ್ವನಿಯೆತ್ತಲಿ ಎಂದು ಹೇಳಿದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago